ಬೆಳೆ ಸಾಲ ನಿರಾಕರಿಸಿದ ಹಿನ್ನೆಲೆ ರೈತನೊಬ್ಬ ಬ್ಯಾಂಕಿನಲ್ಲೇ ಕೀಟನಾಶಕ ಸೇವಿಸಿದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಹೊಸಹೊಳಲು ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ ನಡೆದಿದೆ. ಹೊಸಹೂಳಲು ಗ್ರಾಮದ 73 ವರ್ಷದ ನಿಂಗೇಗೌಡ ಎಂಬವರೇ ವಿಷ ಸೇವಿಸಿದ ರೈತನಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಂಗೇಗೌಡ 4 ಎಕರೆ ಜಮೀನು ಹೊಂದಿದ್ದು, ಅಂತರ ಸಂತೆ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಕಬ್ಬಿನ ಬೆಳೆ ಸಾಲಕ್ಕೆ ಅರ್ಜಿ ಹಾಕಿದ್ದರು. ಒಂದು ತಿಂಗಳ ನಂತರ ಬ್ಯಾಂಕಿನವರು ಸಿಬಿಲ್ ರೇಟ್ ಕಡಿಮೆ ಇದೆ ನಿಮಗೆ ಸಾಲ ಕೊಡಲು ಬರುವುದಿಲ್ಲ ಎಂದು ತಿಳಿಸಿ ನೋಟಿಸ್ ಕೊಟ್ಟ ಕಾರಣ ಬೇಸರಗೊಂಡ ನಿಂಗೇಗೌಡ ಬ್ಯಾಂಕಿನಲ್ಲಿಯೇ ವಿಷ ಸೇವಿಸಿ ಅಸ್ವಸ್ಥರಾದರು. ಕೂಡಲೇ ಬ್ಯಾಂಕಿನ ಸಿಬ್ಬಂದಿ ನಿಂಗೇಗೌಡರ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದರು. ನಂತರ ಅಸ್ವಸ್ಥಗೊಂಡ ನಿಂಗೇಗೌಡರನ್ನು ಎಚ್.ಡಿ. ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿರುತ್ತಾನೆ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…