ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರುವಿಗೆ ಹೋದ ತಹಶೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ. ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ.
ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ ಜಮೀನು ಸರ್ಕಾರಿ ಜಮೀನಾಗಿದೆ.ಸದರಿ ಜಮೀನನ್ನ ದೇಶಕ್ಕೆ ಸೇವೆ ಸಲ್ಲಿಸಿದ ಯೋಧರಿಗೆ ನೀಡುವ ಉದ್ದೇಶದಿಂದ ಮೀಸಲಿಡಲು ಮುಂದಾದ ಅಧಿಕಾರಿಗಳಿಗೆ ಒತ್ತುವರಿ ಬೆಳಕಿಗೆ ಬಂದಿದೆ.
ಒತ್ತುವರಿಯನ್ನ ತೆರವು ಮಾಡಿಸಲು ತಹಸೀಲ್ದಾರ್ ಅಶೋಕ್ ರವರು,ಸರ್ವೆಯರ್ ನಾಗೇಶ್,ರವೀಶ್, ವಿ.ಎ.ಗುರುಪ್ರಸಾದ್ ಆರ್.ಐ.ನಂದೀಶ್ ರವರು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಸಮೇತ ತೆರಳಿದಾಗ ರಾಮದಾಸಯ್ಯ ಎಂಬ ವ್ಯಕ್ತಿ ಅಡ್ಡಿಪಡಿಸಿದ್ದಾನೆ.
ಜೆಸಿಬಿ ಯಂತ್ರದ ಸಮೇತ ಹಾಜರಾದ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾನೆ. ನೋಟೀಸ್ ನೀಡದೆ ತೆರವು ಮಾಡಿಸುತ್ತಿರುವುದಾಗಿ ವಾಗ್ವಾದ ನಡೆಸಿದ್ದಾನೆ. ಸದರಿ ಜಾಗವನ್ನ ಒತ್ತುವರಿ ಮಾಡಿಕೊಂಡಿರುವುದಾಗಿ ತಹಸೀಲ್ದಾರ್ ನೋಟೀಸ್ ಜಾರಿ ಮಾಡಿದ್ದಾರೆ. ಒಟ್ಟಾರೆ ರೈತನ ಮೊಂಡುತನಕ್ಕೆ ಬೆದರಿದ ಅಧಿಕಾರಿಗಳು ಬರಿಗೈಲಿ ಹಿಂದಿರುಗಿದ್ದಾರೆ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…