ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರುವಿಗೆ ಹೋದ ತಹಶೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ. ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ.
ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ ಜಮೀನು ಸರ್ಕಾರಿ ಜಮೀನಾಗಿದೆ.ಸದರಿ ಜಮೀನನ್ನ ದೇಶಕ್ಕೆ ಸೇವೆ ಸಲ್ಲಿಸಿದ ಯೋಧರಿಗೆ ನೀಡುವ ಉದ್ದೇಶದಿಂದ ಮೀಸಲಿಡಲು ಮುಂದಾದ ಅಧಿಕಾರಿಗಳಿಗೆ ಒತ್ತುವರಿ ಬೆಳಕಿಗೆ ಬಂದಿದೆ.
ಒತ್ತುವರಿಯನ್ನ ತೆರವು ಮಾಡಿಸಲು ತಹಸೀಲ್ದಾರ್ ಅಶೋಕ್ ರವರು,ಸರ್ವೆಯರ್ ನಾಗೇಶ್,ರವೀಶ್, ವಿ.ಎ.ಗುರುಪ್ರಸಾದ್ ಆರ್.ಐ.ನಂದೀಶ್ ರವರು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಸಮೇತ ತೆರಳಿದಾಗ ರಾಮದಾಸಯ್ಯ ಎಂಬ ವ್ಯಕ್ತಿ ಅಡ್ಡಿಪಡಿಸಿದ್ದಾನೆ.
ಜೆಸಿಬಿ ಯಂತ್ರದ ಸಮೇತ ಹಾಜರಾದ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾನೆ. ನೋಟೀಸ್ ನೀಡದೆ ತೆರವು ಮಾಡಿಸುತ್ತಿರುವುದಾಗಿ ವಾಗ್ವಾದ ನಡೆಸಿದ್ದಾನೆ. ಸದರಿ ಜಾಗವನ್ನ ಒತ್ತುವರಿ ಮಾಡಿಕೊಂಡಿರುವುದಾಗಿ ತಹಸೀಲ್ದಾರ್ ನೋಟೀಸ್ ಜಾರಿ ಮಾಡಿದ್ದಾರೆ. ಒಟ್ಟಾರೆ ರೈತನ ಮೊಂಡುತನಕ್ಕೆ ಬೆದರಿದ ಅಧಿಕಾರಿಗಳು ಬರಿಗೈಲಿ ಹಿಂದಿರುಗಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…