Latest

ದುಡ್ಡು ಮಾಡಿದ್ದ ಆಂಟಿಯನ್ನು ಪಟಾಯಿಸಿಕೊಂಡು ಓಡಿ ಹೋದ 3 ಮಕ್ಕಳ ತಂದೆ; ಸಿಕ್ಕಿಬಿದ್ದಾಗ ನಡು ಬೀದಿಯಲ್ಲೇ ಶುರುವಾಯಿತು ಜಗಳ.

ಬೆಳಗಾವಿ ಜಿಲ್ಲೆಯ ಮಾರಿಹಾಳದಲ್ಲಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದ್ದು, ಬಸವರಾಜ್ ಸೀತಿಮನಿ ಎಂಬ ವ್ಯಕ್ತಿ ತನ್ನ ಸ್ನೇಹಿತ ಆಸೀಫ್ ಪತ್ನಿ ಮಾಸಾಬಿ ಜತೆಗೆ ಪರಾರಿಯಾಗಿದ್ದ. ಈ ಘಟನೆ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ, ಈ ಜೋಡಿ ಈಗ ಬೆಳಗಾವಿಗೆ ಮರಳಿದ್ದು, ಬಸವರಾಜನ ಪತ್ನಿ ವಾಣಿಶ್ರೀ ಅವರ ಕಣ್ಣಿಗೆ ಬಿದ್ದಿದ್ದಾರೆ.

ನಡುಬೀದಿಯಲ್ಲಿ ಜಗಳ, ಹೊಡೆದಾಟ

ಬೆಳಗಾವಿಯ ಕೊಲ್ಲಾಪುರ ವೃತ್ತದಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಸವರಾಜ್ ಮತ್ತು ಮಾಸಾಬಿಯನ್ನು ಕಂಡ ವಾಣಿಶ್ರೀ, ಕೋಪೋದ್ರಿಕ್ತಳಾಗಿ ನೇರವಾಗಿ ಮಾಸಾಬಿಯ ಮುಂದೆ ಹೋಗಿ ತಮ್ಮ ಗಂಡನನ್ನು ಮತ್ತು ಮಕ್ಕಳನ್ನು ಹಿಂದಿರುಗಿಸಬೇಕೆಂದು ಒತ್ತಾಯಿಸಿದ್ದಾರೆ. ಮಾತಿನ ಚಕಮಕಿ ಹೆಚ್ಚಾಗಿ, ಅದು ವಾಗ್ವಾದಕ್ಕೆ ತಿರುಗಿ, ಕೊನೆಗೆ ಇಬ್ಬರು ಮಹಿಳೆಯರು ಬೀದಿಯಲ್ಲೇ ಜಡೆ ಹಿಡಿದು ಹೊಡೆದಾಡಲು ಶುರುವಿಟ್ಟಿದ್ದಾರೆ. ಈ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಮಧ್ಯ ಪ್ರವೇಶಿಸಿ ಜಗಳ ಬಿಡಿಸಿ ಅವರನ್ನು ತಮ್ಮ ತಮ್ಮ ಮನೆಗಳಿಗೆ ಕಳುಹಿಸಿದ್ದಾರೆ.

ಘಟನೆ ಹಿನ್ನಲೆ

ಬಸವರಾಜ್ ಸೀತಿಮನಿ, ಮದುವೆಯಾದ ವ್ಯಕ್ತಿಯಾಗಿದ್ದು, ಮೂವರು ಮಕ್ಕಳ ತಂದೆಯಾಗಿದ್ದ. ಆದರೆ, ಅವನು ತನ್ನ ಸ್ನೇಹಿತ ಆಸೀಫ್ ಪತ್ನಿ ಮಾಸಾಬಿ ಜತೆಗೆ ಪರಾರಿಯಾಗಿದ್ದ. ಮಾಸಾಬಿ ತನ್ನ ಎರಡು ಮಕ್ಕಳನ್ನು ಕೊಂಡೊಯ್ಯುವುದರ ಜೊತೆಗೆ, 60 ಗ್ರಾಂ ಚಿನ್ನ, ಐದು ಲಕ್ಷ ರೂಪಾಯಿ ನಗದು, ಸೈಟ್ ದಾಖಲೆಗಳು, ಕಾರು ಹಾಗೂ ಮನೆಗೆ ಸೇರಿದ ಹಲವು ವಸ್ತುಗಳನ್ನೂ ತೆಗೆದುಕೊಂಡು ಹೋಗಿದ್ದಳು. ಬಸವರಾಜ್ ತನ್ನೊಬ್ಬ ಮಗನನ್ನು ಕರೆದುಕೊಂಡು ಹೋಗಿರುತ್ತಾನೆ.

ಆಕೆಯ ಗಂಡ ಆಸೀಫ್, ತನ್ನ ಆಸ್ತಿ ಕಳೆದುಕೊಂಡು ಕಂಗಾಲಾಗಿದ್ದನು. ಆತ ತನ್ನ ಪತ್ನಿಯನ್ನು ಹುಡುಕಲು ಜನವರಿ 2ರಂದು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದ.

ಮತ್ತೊಂದೆಡೆ, ವಾಣಿಶ್ರೀ ಹಲವು ವರ್ಷಗಳಿಂದ ಪತಿಯ ಹಿಂಸೆ ಅನುಭವಿಸುತ್ತಾ ಇದ್ದರೂ, ಗಂಡನ ಈ ವರ್ತನೆಯಿಂದ ಆತಂಕಗೊಂಡು, ತನ್ನ ಇಬ್ಬರು ಮಕ್ಕಳೊಂದಿಗೆ ಬೀದಿಪಾಲಾಗಿದ್ದಳು.

ಈಗ, ಈ ಜೋಡಿ ಮತ್ತೆ ಬೆಳಗಾವಿಗೆ ಮರಳಿರುವ ಕಾರಣ, ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಈ ಪ್ರಕರಣಕ್ಕೆ ಮುಂದೆ ಯಾವ ತಿರುವು ಸಿಗಲಿದೆ ಎಂಬುದು ನೋಡಬೇಕಾಗಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago