Latest

ದುಡ್ಡು ಮಾಡಿದ್ದ ಆಂಟಿಯನ್ನು ಪಟಾಯಿಸಿಕೊಂಡು ಓಡಿ ಹೋದ 3 ಮಕ್ಕಳ ತಂದೆ; ಸಿಕ್ಕಿಬಿದ್ದಾಗ ನಡು ಬೀದಿಯಲ್ಲೇ ಶುರುವಾಯಿತು ಜಗಳ.

ಬೆಳಗಾವಿ ಜಿಲ್ಲೆಯ ಮಾರಿಹಾಳದಲ್ಲಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದ್ದು, ಬಸವರಾಜ್ ಸೀತಿಮನಿ ಎಂಬ ವ್ಯಕ್ತಿ ತನ್ನ ಸ್ನೇಹಿತ ಆಸೀಫ್ ಪತ್ನಿ ಮಾಸಾಬಿ ಜತೆಗೆ ಪರಾರಿಯಾಗಿದ್ದ. ಈ ಘಟನೆ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ, ಈ ಜೋಡಿ ಈಗ ಬೆಳಗಾವಿಗೆ ಮರಳಿದ್ದು, ಬಸವರಾಜನ ಪತ್ನಿ ವಾಣಿಶ್ರೀ ಅವರ ಕಣ್ಣಿಗೆ ಬಿದ್ದಿದ್ದಾರೆ.

ನಡುಬೀದಿಯಲ್ಲಿ ಜಗಳ, ಹೊಡೆದಾಟ

ಬೆಳಗಾವಿಯ ಕೊಲ್ಲಾಪುರ ವೃತ್ತದಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಸವರಾಜ್ ಮತ್ತು ಮಾಸಾಬಿಯನ್ನು ಕಂಡ ವಾಣಿಶ್ರೀ, ಕೋಪೋದ್ರಿಕ್ತಳಾಗಿ ನೇರವಾಗಿ ಮಾಸಾಬಿಯ ಮುಂದೆ ಹೋಗಿ ತಮ್ಮ ಗಂಡನನ್ನು ಮತ್ತು ಮಕ್ಕಳನ್ನು ಹಿಂದಿರುಗಿಸಬೇಕೆಂದು ಒತ್ತಾಯಿಸಿದ್ದಾರೆ. ಮಾತಿನ ಚಕಮಕಿ ಹೆಚ್ಚಾಗಿ, ಅದು ವಾಗ್ವಾದಕ್ಕೆ ತಿರುಗಿ, ಕೊನೆಗೆ ಇಬ್ಬರು ಮಹಿಳೆಯರು ಬೀದಿಯಲ್ಲೇ ಜಡೆ ಹಿಡಿದು ಹೊಡೆದಾಡಲು ಶುರುವಿಟ್ಟಿದ್ದಾರೆ. ಈ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಮಧ್ಯ ಪ್ರವೇಶಿಸಿ ಜಗಳ ಬಿಡಿಸಿ ಅವರನ್ನು ತಮ್ಮ ತಮ್ಮ ಮನೆಗಳಿಗೆ ಕಳುಹಿಸಿದ್ದಾರೆ.

ಘಟನೆ ಹಿನ್ನಲೆ

ಬಸವರಾಜ್ ಸೀತಿಮನಿ, ಮದುವೆಯಾದ ವ್ಯಕ್ತಿಯಾಗಿದ್ದು, ಮೂವರು ಮಕ್ಕಳ ತಂದೆಯಾಗಿದ್ದ. ಆದರೆ, ಅವನು ತನ್ನ ಸ್ನೇಹಿತ ಆಸೀಫ್ ಪತ್ನಿ ಮಾಸಾಬಿ ಜತೆಗೆ ಪರಾರಿಯಾಗಿದ್ದ. ಮಾಸಾಬಿ ತನ್ನ ಎರಡು ಮಕ್ಕಳನ್ನು ಕೊಂಡೊಯ್ಯುವುದರ ಜೊತೆಗೆ, 60 ಗ್ರಾಂ ಚಿನ್ನ, ಐದು ಲಕ್ಷ ರೂಪಾಯಿ ನಗದು, ಸೈಟ್ ದಾಖಲೆಗಳು, ಕಾರು ಹಾಗೂ ಮನೆಗೆ ಸೇರಿದ ಹಲವು ವಸ್ತುಗಳನ್ನೂ ತೆಗೆದುಕೊಂಡು ಹೋಗಿದ್ದಳು. ಬಸವರಾಜ್ ತನ್ನೊಬ್ಬ ಮಗನನ್ನು ಕರೆದುಕೊಂಡು ಹೋಗಿರುತ್ತಾನೆ.

ಆಕೆಯ ಗಂಡ ಆಸೀಫ್, ತನ್ನ ಆಸ್ತಿ ಕಳೆದುಕೊಂಡು ಕಂಗಾಲಾಗಿದ್ದನು. ಆತ ತನ್ನ ಪತ್ನಿಯನ್ನು ಹುಡುಕಲು ಜನವರಿ 2ರಂದು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದ.

ಮತ್ತೊಂದೆಡೆ, ವಾಣಿಶ್ರೀ ಹಲವು ವರ್ಷಗಳಿಂದ ಪತಿಯ ಹಿಂಸೆ ಅನುಭವಿಸುತ್ತಾ ಇದ್ದರೂ, ಗಂಡನ ಈ ವರ್ತನೆಯಿಂದ ಆತಂಕಗೊಂಡು, ತನ್ನ ಇಬ್ಬರು ಮಕ್ಕಳೊಂದಿಗೆ ಬೀದಿಪಾಲಾಗಿದ್ದಳು.

ಈಗ, ಈ ಜೋಡಿ ಮತ್ತೆ ಬೆಳಗಾವಿಗೆ ಮರಳಿರುವ ಕಾರಣ, ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಈ ಪ್ರಕರಣಕ್ಕೆ ಮುಂದೆ ಯಾವ ತಿರುವು ಸಿಗಲಿದೆ ಎಂಬುದು ನೋಡಬೇಕಾಗಿದೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

6 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

6 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

9 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

11 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

11 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

11 hours ago