ಶಿರಸಿ-ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಕೊಲೆ ನಡೆದಿದೆ. ಪ್ರಯಾಣಿಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಶನಿವಾರ ಸಂಜೆ ಅಂಕೋಲಾದಿoದ ಹೊರಟ ಬಸ್ಸು ದಾವಣಗೆರೆ ಮೂಲಕ ಬೆಂಗಳೂರು ತಲುಪಬೇಕಿತ್ತು. ಆ ಬಸ್ಸಿನಲ್ಲಿ ಸಾಗರದ ಗಂಗಾಧರ ಎಂಬಾತರು ತಮ್ಮ ಪತ್ನಿ ಜೊತೆ ಪ್ರಯಾಣ ಮಾಡುತ್ತಿದ್ದರು. ಶಿರಸಿ ಹೊಸ ಬಸ್ ನಿಲ್ದಾಣದಲ್ಲಿ ಅವರು ಬಸ್ಸು ಹತ್ತಿದ್ದು, ಇನ್ನೂ ಟಿಕೆಟ್ ಪಡೆದಿರಲಿಲ್ಲ. ಬಸ್ಸು ಜೂ ಸರ್ಕಲ್ ದಾಡಿ ಪಂಡಿತ್ ಆಸ್ಪತ್ರೆ ಬಳಿ ಬರುವ ವೇಳೆಗೆ ಶಿರಸಿ ದುಂಡಸಿನಗರದ ಪ್ರೀತಂ ಹಾಗೂ ಗಂಗಾಧರ ನಡುವೆ ಜಗಳ ಶುರುವಾಯಿತು.
ಈ ವೇಳೆ ಅಕ್ಕಪಕ್ಕದಲ್ಲಿದ್ದ ಪ್ರಯಾಣಿಕರು ಜಗಳ ಬಿಡಿಸುವ ಪ್ರಯತ್ನ ಮಾಡಿದರು. ಆದರೆ, ಅದು ಫಲ ಕೊಡಲಿಲ್ಲ. ಸಿಟ್ಟಾದ ಪ್ರೀತಂ ತಮ್ಮ ಬಳಿಯಿದ್ದ ಚಾಕುವಿನಿಂದ ಗಂಗಾಧರ ಅವರ ಎದೆಗೆ ಚುಚ್ಚಿದರು. ರಕ್ತದ ಮೊಡವಿನಲ್ಲಿ ಹೊರಳಾಡಿ ಗಂಗಾಧರ ಕೊನೆ ಉಸಿರೆಳೆದರು. ಇದಾದ ನಂತರ ಪ್ರೀತಂ ಬಸ್ಸಿನಿಂದ ಕೆಳಗೆ ಹಾರಿ ಓಡಿ ಹೋದರು. ಪೊಲೀಸರು ಆಗಮಿಸಿ ಕೊಲೆಗಾರನ ಹುಡುಕಾಟ ನಡೆಸಿದ್ದಾರೆ.ಶಿರಸಿ ಸರ್ಕಾರಿ ಆಸ್ಪತ್ರೆಯಲ್ಲಿ ಶವವನ್ನು ಇರಿಸಿದ್ದು, ಆಸ್ಪತ್ರೆಗೆ ಸಿರ್ಸಿ ಡಿ.ಎಸ್.ಪಿ ಕೆ.ಎಲ್.ಗಣೇಶ್ ಬೇಟಿ ನೀಡಿ, ಮಾಹಿತಿ ಕಲೆ ಹಾಕಿ ಕೋಲೆಗಾರನ ಪತ್ತೆಗೆ ಬಲೆ ಬೀಸಿ ಅರ್ಧ ಗಂಟೆಯಲ್ಲಿ ಕೋಲೆಗಾರ ನ ಅರೆಸ್ಟ್ ಮಾಡಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…