Latest

ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕರ ಜಗಳ ಕೊಲೆಯಲ್ಲಿ ಅಂತ್ಯ

ಶಿರಸಿ-ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಕೊಲೆ ನಡೆದಿದೆ. ಪ್ರಯಾಣಿಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಶನಿವಾರ ಸಂಜೆ ಅಂಕೋಲಾದಿoದ ಹೊರಟ ಬಸ್ಸು ದಾವಣಗೆರೆ ಮೂಲಕ ಬೆಂಗಳೂರು ತಲುಪಬೇಕಿತ್ತು. ಆ ಬಸ್ಸಿನಲ್ಲಿ ಸಾಗರದ ಗಂಗಾಧರ ಎಂಬಾತರು ತಮ್ಮ ಪತ್ನಿ ಜೊತೆ ಪ್ರಯಾಣ ಮಾಡುತ್ತಿದ್ದರು. ಶಿರಸಿ ಹೊಸ ಬಸ್ ನಿಲ್ದಾಣದಲ್ಲಿ ಅವರು ಬಸ್ಸು ಹತ್ತಿದ್ದು, ಇನ್ನೂ ಟಿಕೆಟ್ ಪಡೆದಿರಲಿಲ್ಲ. ಬಸ್ಸು ಜೂ ಸರ್ಕಲ್ ದಾಡಿ ಪಂಡಿತ್ ಆಸ್ಪತ್ರೆ ಬಳಿ ಬರುವ ವೇಳೆಗೆ ಶಿರಸಿ ದುಂಡಸಿನಗರದ ಪ್ರೀತಂ ಹಾಗೂ ಗಂಗಾಧರ ನಡುವೆ ಜಗಳ ಶುರುವಾಯಿತು.

ಈ ವೇಳೆ ಅಕ್ಕಪಕ್ಕದಲ್ಲಿದ್ದ ಪ್ರಯಾಣಿಕರು ಜಗಳ ಬಿಡಿಸುವ ಪ್ರಯತ್ನ ಮಾಡಿದರು. ಆದರೆ, ಅದು ಫಲ ಕೊಡಲಿಲ್ಲ. ಸಿಟ್ಟಾದ ಪ್ರೀತಂ ತಮ್ಮ ಬಳಿಯಿದ್ದ ಚಾಕುವಿನಿಂದ ಗಂಗಾಧರ ಅವರ ಎದೆಗೆ ಚುಚ್ಚಿದರು. ರಕ್ತದ ಮೊಡವಿನಲ್ಲಿ ಹೊರಳಾಡಿ ಗಂಗಾಧರ ಕೊನೆ ಉಸಿರೆಳೆದರು. ಇದಾದ ನಂತರ ಪ್ರೀತಂ ಬಸ್ಸಿನಿಂದ ಕೆಳಗೆ ಹಾರಿ ಓಡಿ ಹೋದರು. ಪೊಲೀಸರು ಆಗಮಿಸಿ ಕೊಲೆಗಾರನ ಹುಡುಕಾಟ ನಡೆಸಿದ್ದಾರೆ.ಶಿರಸಿ ಸರ್ಕಾರಿ ಆಸ್ಪತ್ರೆಯಲ್ಲಿ ಶವವನ್ನು ಇರಿಸಿದ್ದು, ಆಸ್ಪತ್ರೆಗೆ ಸಿರ್ಸಿ ಡಿ.ಎಸ್.ಪಿ ಕೆ.ಎಲ್.ಗಣೇಶ್ ಬೇಟಿ ನೀಡಿ, ಮಾಹಿತಿ ಕಲೆ ಹಾಕಿ ಕೋಲೆಗಾರನ ಪತ್ತೆಗೆ ಬಲೆ ಬೀಸಿ ಅರ್ಧ ಗಂಟೆಯಲ್ಲಿ ಕೋಲೆಗಾರ ನ ಅರೆಸ್ಟ್ ಮಾಡಿದ್ದಾರೆ.

nazeer ahamad

Recent Posts

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

1 hour ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

2 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

2 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

12 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

12 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

15 hours ago