ಶಿರಸಿ-ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಕೊಲೆ ನಡೆದಿದೆ. ಪ್ರಯಾಣಿಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಶನಿವಾರ ಸಂಜೆ ಅಂಕೋಲಾದಿoದ ಹೊರಟ ಬಸ್ಸು ದಾವಣಗೆರೆ ಮೂಲಕ ಬೆಂಗಳೂರು ತಲುಪಬೇಕಿತ್ತು. ಆ ಬಸ್ಸಿನಲ್ಲಿ ಸಾಗರದ ಗಂಗಾಧರ ಎಂಬಾತರು ತಮ್ಮ ಪತ್ನಿ ಜೊತೆ ಪ್ರಯಾಣ ಮಾಡುತ್ತಿದ್ದರು. ಶಿರಸಿ ಹೊಸ ಬಸ್ ನಿಲ್ದಾಣದಲ್ಲಿ ಅವರು ಬಸ್ಸು ಹತ್ತಿದ್ದು, ಇನ್ನೂ ಟಿಕೆಟ್ ಪಡೆದಿರಲಿಲ್ಲ. ಬಸ್ಸು ಜೂ ಸರ್ಕಲ್ ದಾಡಿ ಪಂಡಿತ್ ಆಸ್ಪತ್ರೆ ಬಳಿ ಬರುವ ವೇಳೆಗೆ ಶಿರಸಿ ದುಂಡಸಿನಗರದ ಪ್ರೀತಂ ಹಾಗೂ ಗಂಗಾಧರ ನಡುವೆ ಜಗಳ ಶುರುವಾಯಿತು.
ಈ ವೇಳೆ ಅಕ್ಕಪಕ್ಕದಲ್ಲಿದ್ದ ಪ್ರಯಾಣಿಕರು ಜಗಳ ಬಿಡಿಸುವ ಪ್ರಯತ್ನ ಮಾಡಿದರು. ಆದರೆ, ಅದು ಫಲ ಕೊಡಲಿಲ್ಲ. ಸಿಟ್ಟಾದ ಪ್ರೀತಂ ತಮ್ಮ ಬಳಿಯಿದ್ದ ಚಾಕುವಿನಿಂದ ಗಂಗಾಧರ ಅವರ ಎದೆಗೆ ಚುಚ್ಚಿದರು. ರಕ್ತದ ಮೊಡವಿನಲ್ಲಿ ಹೊರಳಾಡಿ ಗಂಗಾಧರ ಕೊನೆ ಉಸಿರೆಳೆದರು. ಇದಾದ ನಂತರ ಪ್ರೀತಂ ಬಸ್ಸಿನಿಂದ ಕೆಳಗೆ ಹಾರಿ ಓಡಿ ಹೋದರು. ಪೊಲೀಸರು ಆಗಮಿಸಿ ಕೊಲೆಗಾರನ ಹುಡುಕಾಟ ನಡೆಸಿದ್ದಾರೆ.ಶಿರಸಿ ಸರ್ಕಾರಿ ಆಸ್ಪತ್ರೆಯಲ್ಲಿ ಶವವನ್ನು ಇರಿಸಿದ್ದು, ಆಸ್ಪತ್ರೆಗೆ ಸಿರ್ಸಿ ಡಿ.ಎಸ್.ಪಿ ಕೆ.ಎಲ್.ಗಣೇಶ್ ಬೇಟಿ ನೀಡಿ, ಮಾಹಿತಿ ಕಲೆ ಹಾಕಿ ಕೋಲೆಗಾರನ ಪತ್ತೆಗೆ ಬಲೆ ಬೀಸಿ ಅರ್ಧ ಗಂಟೆಯಲ್ಲಿ ಕೋಲೆಗಾರ ನ ಅರೆಸ್ಟ್ ಮಾಡಿದ್ದಾರೆ.
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…