ಶಿರಸಿ-ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಕೊಲೆ ನಡೆದಿದೆ. ಪ್ರಯಾಣಿಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಶನಿವಾರ ಸಂಜೆ ಅಂಕೋಲಾದಿoದ ಹೊರಟ ಬಸ್ಸು ದಾವಣಗೆರೆ ಮೂಲಕ ಬೆಂಗಳೂರು ತಲುಪಬೇಕಿತ್ತು. ಆ ಬಸ್ಸಿನಲ್ಲಿ ಸಾಗರದ ಗಂಗಾಧರ ಎಂಬಾತರು ತಮ್ಮ ಪತ್ನಿ ಜೊತೆ ಪ್ರಯಾಣ ಮಾಡುತ್ತಿದ್ದರು. ಶಿರಸಿ ಹೊಸ ಬಸ್ ನಿಲ್ದಾಣದಲ್ಲಿ ಅವರು ಬಸ್ಸು ಹತ್ತಿದ್ದು, ಇನ್ನೂ ಟಿಕೆಟ್ ಪಡೆದಿರಲಿಲ್ಲ. ಬಸ್ಸು ಜೂ ಸರ್ಕಲ್ ದಾಡಿ ಪಂಡಿತ್ ಆಸ್ಪತ್ರೆ ಬಳಿ ಬರುವ ವೇಳೆಗೆ ಶಿರಸಿ ದುಂಡಸಿನಗರದ ಪ್ರೀತಂ ಹಾಗೂ ಗಂಗಾಧರ ನಡುವೆ ಜಗಳ ಶುರುವಾಯಿತು.
ಈ ವೇಳೆ ಅಕ್ಕಪಕ್ಕದಲ್ಲಿದ್ದ ಪ್ರಯಾಣಿಕರು ಜಗಳ ಬಿಡಿಸುವ ಪ್ರಯತ್ನ ಮಾಡಿದರು. ಆದರೆ, ಅದು ಫಲ ಕೊಡಲಿಲ್ಲ. ಸಿಟ್ಟಾದ ಪ್ರೀತಂ ತಮ್ಮ ಬಳಿಯಿದ್ದ ಚಾಕುವಿನಿಂದ ಗಂಗಾಧರ ಅವರ ಎದೆಗೆ ಚುಚ್ಚಿದರು. ರಕ್ತದ ಮೊಡವಿನಲ್ಲಿ ಹೊರಳಾಡಿ ಗಂಗಾಧರ ಕೊನೆ ಉಸಿರೆಳೆದರು. ಇದಾದ ನಂತರ ಪ್ರೀತಂ ಬಸ್ಸಿನಿಂದ ಕೆಳಗೆ ಹಾರಿ ಓಡಿ ಹೋದರು. ಪೊಲೀಸರು ಆಗಮಿಸಿ ಕೊಲೆಗಾರನ ಹುಡುಕಾಟ ನಡೆಸಿದ್ದಾರೆ.ಶಿರಸಿ ಸರ್ಕಾರಿ ಆಸ್ಪತ್ರೆಯಲ್ಲಿ ಶವವನ್ನು ಇರಿಸಿದ್ದು, ಆಸ್ಪತ್ರೆಗೆ ಸಿರ್ಸಿ ಡಿ.ಎಸ್.ಪಿ ಕೆ.ಎಲ್.ಗಣೇಶ್ ಬೇಟಿ ನೀಡಿ, ಮಾಹಿತಿ ಕಲೆ ಹಾಕಿ ಕೋಲೆಗಾರನ ಪತ್ತೆಗೆ ಬಲೆ ಬೀಸಿ ಅರ್ಧ ಗಂಟೆಯಲ್ಲಿ ಕೋಲೆಗಾರ ನ ಅರೆಸ್ಟ್ ಮಾಡಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…