ಬೆಳಗಾವಿ ಜಿಲ್ಲೆ ಮುತಗಾ ಗ್ರಾಮದಲ್ಲಿ ವೃದ್ಧೆಯೊಬ್ಬರನ್ನು ಮೋಸಗೊಳಿಸಿ ಬಂಗಾರದ ಆಭರಣ ದೋಚಿದ ಘಟನೆ ನಡೆದಿದೆ. 75 ವರ್ಷದ ಉಮಕ್ಕ ರಾಮು ಕೇದಾರಿ ಎಂಬವರು ಈ ವಂಚನೆಯ ಬಲಿಯಾದವರು.
ಸೌತೆಕಾಯಿ ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ಉಮಕ್ಕ ಅವರ ಬಳಿ ಅಪರಿಚಿತನೊಬ್ಬ ಬಂದು, “ಅಂಚೆ ಕಚೇರಿಯಲ್ಲಿ ವಯೋವೃದ್ಧರಿಗೆ 6 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ನೀವು ಹೋಗಿ ಹಣ ಪಡೆಯಿರಿ” ಎಂದು ಮಾತನಾಡಿದ್ದಾನೆ. ತನ್ನನ್ನು ಪರಿಚಿತನಂತೆ ತೋರಿಸಿಕೊಂಡಿದ್ದ ಈ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ.
ನಂತರ ಒಂದು ಕಟ್ಟಡದ ಬಳಿ ತಂದು, “ಬಂಗಾರದ ಆಭರಣ ಧರಿಸಿ ಒಳಗೆ ಹೋದರೆ ಹಣ ಕೊಡಲ್ಲ. ಅವುಗಳನ್ನು ತೆಗೆದು ಕೊಡಿರಿ” ಎಂದು ಹೇಳಿ, ಉಮಕ್ಕ ಅವರ ಓಲೆ ಮತ್ತು ಬಳೆಗಳನ್ನು ತೆಗೆದುಕೊಂಡಿದ್ದಾನೆ. ವೃದ್ಧೆ ಆತನ ಮಾತು ನಂಬಿ ತನ್ನ ಆಭರಣಗಳನ್ನು ನೀಡಿದ ನಂತರ ಒಳಗೆ ಹೋಗುತ್ತಿದ್ದಂತೆ, ವಂಚಕ ಅಲ್ಲಿಂದ ನಾಪತ್ತೆಯಾಗಿದ್ದಾನೆ.
ತಕ್ಷಣವೇ ಎಚ್ಚೆತ್ತುಕೊಂಡ ಉಮಕ್ಕ ಅವರು ಮಾರಿಹಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದು, ಸಾರ್ವಜನಿಕರಲ್ಲಿ ಎಚ್ಚರಿಕೆ ವಹಿಸಲು ಪೊಲೀಸರ ಮನವಿ ಮಾಡಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…