ಬೆಳಗಾವಿ ಜಿಲ್ಲೆ ಮುತಗಾ ಗ್ರಾಮದಲ್ಲಿ ವೃದ್ಧೆಯೊಬ್ಬರನ್ನು ಮೋಸಗೊಳಿಸಿ ಬಂಗಾರದ ಆಭರಣ ದೋಚಿದ ಘಟನೆ ನಡೆದಿದೆ. 75 ವರ್ಷದ ಉಮಕ್ಕ ರಾಮು ಕೇದಾರಿ ಎಂಬವರು ಈ ವಂಚನೆಯ ಬಲಿಯಾದವರು.
ಸೌತೆಕಾಯಿ ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ಉಮಕ್ಕ ಅವರ ಬಳಿ ಅಪರಿಚಿತನೊಬ್ಬ ಬಂದು, “ಅಂಚೆ ಕಚೇರಿಯಲ್ಲಿ ವಯೋವೃದ್ಧರಿಗೆ 6 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ನೀವು ಹೋಗಿ ಹಣ ಪಡೆಯಿರಿ” ಎಂದು ಮಾತನಾಡಿದ್ದಾನೆ. ತನ್ನನ್ನು ಪರಿಚಿತನಂತೆ ತೋರಿಸಿಕೊಂಡಿದ್ದ ಈ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ.
ನಂತರ ಒಂದು ಕಟ್ಟಡದ ಬಳಿ ತಂದು, “ಬಂಗಾರದ ಆಭರಣ ಧರಿಸಿ ಒಳಗೆ ಹೋದರೆ ಹಣ ಕೊಡಲ್ಲ. ಅವುಗಳನ್ನು ತೆಗೆದು ಕೊಡಿರಿ” ಎಂದು ಹೇಳಿ, ಉಮಕ್ಕ ಅವರ ಓಲೆ ಮತ್ತು ಬಳೆಗಳನ್ನು ತೆಗೆದುಕೊಂಡಿದ್ದಾನೆ. ವೃದ್ಧೆ ಆತನ ಮಾತು ನಂಬಿ ತನ್ನ ಆಭರಣಗಳನ್ನು ನೀಡಿದ ನಂತರ ಒಳಗೆ ಹೋಗುತ್ತಿದ್ದಂತೆ, ವಂಚಕ ಅಲ್ಲಿಂದ ನಾಪತ್ತೆಯಾಗಿದ್ದಾನೆ.
ತಕ್ಷಣವೇ ಎಚ್ಚೆತ್ತುಕೊಂಡ ಉಮಕ್ಕ ಅವರು ಮಾರಿಹಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದು, ಸಾರ್ವಜನಿಕರಲ್ಲಿ ಎಚ್ಚರಿಕೆ ವಹಿಸಲು ಪೊಲೀಸರ ಮನವಿ ಮಾಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…