ಬೆಳಗಾವಿ ಜಿಲ್ಲೆ ಮುತಗಾ ಗ್ರಾಮದಲ್ಲಿ ವೃದ್ಧೆಯೊಬ್ಬರನ್ನು ಮೋಸಗೊಳಿಸಿ ಬಂಗಾರದ ಆಭರಣ ದೋಚಿದ ಘಟನೆ ನಡೆದಿದೆ. 75 ವರ್ಷದ ಉಮಕ್ಕ ರಾಮು ಕೇದಾರಿ ಎಂಬವರು ಈ ವಂಚನೆಯ ಬಲಿಯಾದವರು.
ಸೌತೆಕಾಯಿ ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ಉಮಕ್ಕ ಅವರ ಬಳಿ ಅಪರಿಚಿತನೊಬ್ಬ ಬಂದು, “ಅಂಚೆ ಕಚೇರಿಯಲ್ಲಿ ವಯೋವೃದ್ಧರಿಗೆ 6 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ನೀವು ಹೋಗಿ ಹಣ ಪಡೆಯಿರಿ” ಎಂದು ಮಾತನಾಡಿದ್ದಾನೆ. ತನ್ನನ್ನು ಪರಿಚಿತನಂತೆ ತೋರಿಸಿಕೊಂಡಿದ್ದ ಈ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ.
ನಂತರ ಒಂದು ಕಟ್ಟಡದ ಬಳಿ ತಂದು, “ಬಂಗಾರದ ಆಭರಣ ಧರಿಸಿ ಒಳಗೆ ಹೋದರೆ ಹಣ ಕೊಡಲ್ಲ. ಅವುಗಳನ್ನು ತೆಗೆದು ಕೊಡಿರಿ” ಎಂದು ಹೇಳಿ, ಉಮಕ್ಕ ಅವರ ಓಲೆ ಮತ್ತು ಬಳೆಗಳನ್ನು ತೆಗೆದುಕೊಂಡಿದ್ದಾನೆ. ವೃದ್ಧೆ ಆತನ ಮಾತು ನಂಬಿ ತನ್ನ ಆಭರಣಗಳನ್ನು ನೀಡಿದ ನಂತರ ಒಳಗೆ ಹೋಗುತ್ತಿದ್ದಂತೆ, ವಂಚಕ ಅಲ್ಲಿಂದ ನಾಪತ್ತೆಯಾಗಿದ್ದಾನೆ.
ತಕ್ಷಣವೇ ಎಚ್ಚೆತ್ತುಕೊಂಡ ಉಮಕ್ಕ ಅವರು ಮಾರಿಹಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದು, ಸಾರ್ವಜನಿಕರಲ್ಲಿ ಎಚ್ಚರಿಕೆ ವಹಿಸಲು ಪೊಲೀಸರ ಮನವಿ ಮಾಡಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…