Latest

ಸರ್ಕಾರಿ ಕಚೇರಿಯೋ ಅಥವಾ ವೈಯಕ್ತಿಕ ಕೊಠಡಿಯೋ? ಉತ್ತರ ಕನ್ನಡದಲ್ಲಿಅಧಿಕಾರಿಯ ದರ್ಬಾರ್.

ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿ ಒಂದು ವಿಚಿತ್ರ ಕಾರಣಕ್ಕೆ ಚರ್ಚೆಯ ಕೇಂದ್ರಬಿಂದುವಾಗಿದೆ. ಜನಸೇವೆ ಎಂಬ ಅರ್ಥದಲ್ಲಿ ಸರ್ಕಾರಿ ಕೆಲಸವನ್ನು ದೇವರ ಕೆಲಸವೆಂದು ಹೇಳುವ ರೂಢಿ ಇದ್ದರೂ, ಇಲ್ಲೊಬ್ಬ ಅಧಿಕಾರಿ ತನ್ನ ಕಚೇರಿಯನ್ನೇ ಸ್ವಗೃಹವನ್ನಾಗಿ ಪರಿವರ್ತಿಸಿ ಅಚ್ಚರಿ ಮೂಡಿಸಿದ್ದಾರೆ.

ಆಫೀಸ್ ಅಥವಾ ವೈಯಕ್ತಿಕ ಕೊಠಡಿಯಾರು?

ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಬೃಹತ್ ಕೈಗಾರಿಕಾ ಇಲಾಖೆಯ ಅಧಿಕಾರಿ ಜಯಂತ್, ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದಾರೆ. ಕಚೇರಿ ಸ್ಥಳಾಂತರದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ಆಘಾತಕ್ಕೀಡಾದ ಸಂಗತಿಯಾಗಿದೆ. ಕಚೇರಿಯೊಳಗೆ ಮಂಚ, ಹಾಸಿಗೆ, ಇತರ ವೈಯಕ್ತಿಕ ಬಳಕೆಗಾಗಿ ಇರುವ ವಸ್ತುಗಳು ಕಂಡುಬಂದಿದ್ದು, ಇದು ಸರ್ಕಾರಿ ಕಚೇರಿಯೋ ಅಥವಾ ವ್ಯಕ್ತಿಗತ ವಿಶ್ರಾಂತಿ ಕೋಣೆಯೋ ಎಂಬ ಗೊಂದಲ ಮೂಡಿಸಿದೆ.

ಸ್ಥಳಾಂತರದ ವೇಳೆ ಬಹಿರಂಗವಾದ ವಿಷಯ

ಕಚೇರಿ ಸ್ಥಳಾಂತರ ಮಾಡಬೇಕೆಂಬ ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ, ಕಾರವಾರದ ಸಹಾಯಕ ಆಯುಕ್ತ ಕನಿಷ್ಕ ಇದನ್ನು ಮುಂದುವರಿಸಿದರು. ಸ್ಥಳಾಂತರ ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಈ ಅಸಾಮಾನ್ಯ ವಸ್ತುಗಳು ಕಂಡುಬಂದವು. ಆದರೆ, ಈ ಬಗ್ಗೆ ಅಲ್ಲಿನ ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಯಾರೂ ಸ್ಪಷ್ಟ ಉತ್ತರ ನೀಡಲಿಲ್ಲ.

ಜಿಲ್ಲಾಧಿಕಾರಿಗಳ ತೀವ್ರ ತಪಾಸಣೆ

ಈ ಘಟನೆ ಸಂಬಂಧ ಜಿಲ್ಲಾಧಿಕಾರಿ ಸ್ವತಃ ವಿಚಾರಣೆ ನಡೆಸಿದ್ದು, ಏಕೆ ಹಾಗೂ ಹೇಗೆ ಈ ರೀತಿಯ ಸ್ಥಿತಿ ಉಂಟಾಗಿದೆ ಎಂಬುದರ ಬಗ್ಗೆ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಿದ್ದಾರೆ. ಈಗಾಗಲೇ ಈ ವಿಷಯ ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಸರಿಯಾದ ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಸರ್ಕಾರಿ ಕಚೇರಿಯ ಶಿಸ್ತು, ನೈತಿಕತೆ ಹಾಗೂ ಅಧಿಕಾರಿಗಳ ನಡವಳಿಕೆಗೆ ಸಂಬಂಧಿಸಿದಂತೆ ಈ ಘಟನೆ ಸಾಕಷ್ಟು ಪ್ರಶ್ನೆಗಳನ್ನು ಎಬ್ಬಿಸಿದೆ. ಮುಂದೇನು ನಡೆಯಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

nazeer ahamad

Recent Posts

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

6 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

21 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

23 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago