Latest

ಸರ್ಕಾರಿ ಕಚೇರಿಯೋ ಅಥವಾ ವೈಯಕ್ತಿಕ ಕೊಠಡಿಯೋ? ಉತ್ತರ ಕನ್ನಡದಲ್ಲಿಅಧಿಕಾರಿಯ ದರ್ಬಾರ್.

ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿ ಒಂದು ವಿಚಿತ್ರ ಕಾರಣಕ್ಕೆ ಚರ್ಚೆಯ ಕೇಂದ್ರಬಿಂದುವಾಗಿದೆ. ಜನಸೇವೆ ಎಂಬ ಅರ್ಥದಲ್ಲಿ ಸರ್ಕಾರಿ ಕೆಲಸವನ್ನು ದೇವರ ಕೆಲಸವೆಂದು ಹೇಳುವ ರೂಢಿ ಇದ್ದರೂ, ಇಲ್ಲೊಬ್ಬ ಅಧಿಕಾರಿ ತನ್ನ ಕಚೇರಿಯನ್ನೇ ಸ್ವಗೃಹವನ್ನಾಗಿ ಪರಿವರ್ತಿಸಿ ಅಚ್ಚರಿ ಮೂಡಿಸಿದ್ದಾರೆ.

ಆಫೀಸ್ ಅಥವಾ ವೈಯಕ್ತಿಕ ಕೊಠಡಿಯಾರು?

ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಬೃಹತ್ ಕೈಗಾರಿಕಾ ಇಲಾಖೆಯ ಅಧಿಕಾರಿ ಜಯಂತ್, ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದಾರೆ. ಕಚೇರಿ ಸ್ಥಳಾಂತರದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ಆಘಾತಕ್ಕೀಡಾದ ಸಂಗತಿಯಾಗಿದೆ. ಕಚೇರಿಯೊಳಗೆ ಮಂಚ, ಹಾಸಿಗೆ, ಇತರ ವೈಯಕ್ತಿಕ ಬಳಕೆಗಾಗಿ ಇರುವ ವಸ್ತುಗಳು ಕಂಡುಬಂದಿದ್ದು, ಇದು ಸರ್ಕಾರಿ ಕಚೇರಿಯೋ ಅಥವಾ ವ್ಯಕ್ತಿಗತ ವಿಶ್ರಾಂತಿ ಕೋಣೆಯೋ ಎಂಬ ಗೊಂದಲ ಮೂಡಿಸಿದೆ.

ಸ್ಥಳಾಂತರದ ವೇಳೆ ಬಹಿರಂಗವಾದ ವಿಷಯ

ಕಚೇರಿ ಸ್ಥಳಾಂತರ ಮಾಡಬೇಕೆಂಬ ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ, ಕಾರವಾರದ ಸಹಾಯಕ ಆಯುಕ್ತ ಕನಿಷ್ಕ ಇದನ್ನು ಮುಂದುವರಿಸಿದರು. ಸ್ಥಳಾಂತರ ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಈ ಅಸಾಮಾನ್ಯ ವಸ್ತುಗಳು ಕಂಡುಬಂದವು. ಆದರೆ, ಈ ಬಗ್ಗೆ ಅಲ್ಲಿನ ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಯಾರೂ ಸ್ಪಷ್ಟ ಉತ್ತರ ನೀಡಲಿಲ್ಲ.

ಜಿಲ್ಲಾಧಿಕಾರಿಗಳ ತೀವ್ರ ತಪಾಸಣೆ

ಈ ಘಟನೆ ಸಂಬಂಧ ಜಿಲ್ಲಾಧಿಕಾರಿ ಸ್ವತಃ ವಿಚಾರಣೆ ನಡೆಸಿದ್ದು, ಏಕೆ ಹಾಗೂ ಹೇಗೆ ಈ ರೀತಿಯ ಸ್ಥಿತಿ ಉಂಟಾಗಿದೆ ಎಂಬುದರ ಬಗ್ಗೆ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಿದ್ದಾರೆ. ಈಗಾಗಲೇ ಈ ವಿಷಯ ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಸರಿಯಾದ ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಸರ್ಕಾರಿ ಕಚೇರಿಯ ಶಿಸ್ತು, ನೈತಿಕತೆ ಹಾಗೂ ಅಧಿಕಾರಿಗಳ ನಡವಳಿಕೆಗೆ ಸಂಬಂಧಿಸಿದಂತೆ ಈ ಘಟನೆ ಸಾಕಷ್ಟು ಪ್ರಶ್ನೆಗಳನ್ನು ಎಬ್ಬಿಸಿದೆ. ಮುಂದೇನು ನಡೆಯಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

nazeer ahamad

Recent Posts

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

5 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

9 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

9 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

9 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

19 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

19 hours ago