Latest

ಕೆಲಸದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ

ಕೆ ಶ್ರೀಜಾ (48) ವಯಕೋಮ್​ನ ಪೊಲಸ್ಸೆರಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸದ ಹೊರೆ ತಾಳಲಾರದೆ ಬಡ್ತಿ ರದ್ದುಗೊಳಿಸುವಂತೆ ಶಿಕ್ಷಣ ಸಚಿವರಿಗೆ ಶ್ರೀಜಾ ಅವರು ಮನವಿ ಮಾಡಿದ್ದರು. ಆದರೆ, ಮನವಿಯನ್ನು ತಿರಸ್ಕರಿಸಿದ ಪರಿಣಾಮ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಸಂಬಂಧಿಕರು ದೂರಿದ್ದಾರೆ.
ವೈಯಕಂ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ರೀಜಾ ಅವರು ಜೂ.1ರಂದು ಕೀಜೂರು ಜಿಎಲ್‌ಪಿಎಸ್‌ ಮುಖ್ಯೋಪಾಧ್ಯಾಯಿನಿಯಾಗಿ ಬಡ್ತಿ ಹೊಂದಿದ್ದರು. ಮರುದಿನವೇ ಕೆಲಸಕ್ಕೆ ಸೇರಿದ್ದರು. ಹೆಚ್ಚಿನ ಜವಾಬ್ದಾರಿಯುತ ಕೆಲಸದ ಒತ್ತಡ ತಾಳಲಾರದೆ ರಜೆ ತೆಗೆದುಕೊಂಡಿದ್ದರು. ಇದಾದ ಬಳಿಕ ಜುಲೈ 7 ರಂದು ಶಿಕ್ಷಣ ಸಚಿವರಿಗೆ ಅರ್ಜಿಯನ್ನು ಸಲ್ಲಿಸಿ ತನ್ನ ಪತಿಯ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಬಡ್ತಿಯನ್ನು ರದ್ದುಗೊಳಿಸುವಂತೆ ಕೇಳಿದ್ದರು. ಆಕೆ ಹಿಂದೆ ವೈಯಕಂನಲ್ಲಿ ಕೆಲಸ ಮಾಡುತ್ತಿದ್ದ ಶಾಲೆಯಲ್ಲಿ ಶಿಕ್ಷಕಿಯಾಗಿ ನೇಮಿಸಬೇಕೆಂಬುದು ಆಕೆಯ ಬೇಡಿಕೆಯಾಗಿತ್ತು. ಆದರೆ, ಅರ್ಜಿಯನ್ನು ಪರಿಗಣಿಸಲು ನಿಯಮದಲ್ಲಿ ಅವಕಾಶವಿಲ್ಲ ಎಂದು ಕುರವಿಲಂಗಾಡ್ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಜಾ ಅವರಿಗೆ ಉತ್ತರಿಸಿದ್ದರು.
ಮನವಿ ತಿರಸ್ಕರಿಸಿದ್ದರಿಂದ ತೀವ್ರವಾಗಿ ಮನನೊಂದಿದ್ದ ಶ್ರೀಜಾ ಕೆಲವು ದಿನಗಳವರೆಗೆ ಸರಿ ಹೋಗಬಹುದು ಅಂತಾ ಹೇಗೋ ಕೆಲಸ ಮಾಡಿಕೊಂಡು ಬಂದಿದ್ದರು. ಆದರೆ, ಕೆಲಸದ ಹೊರೆ ಕಡಿಮೆಯಾಗದ ಕಾರಣ, ತೀವ್ರವಾಗಿ ಮನನೊಂದು ಶುಕ್ರವಾರ ಆತ್ಮಹತ್ಯೆಯ ಮಾಡಿಕೊಂಡ ಘಟನೆ ಕೇರಳದ ವಯಕೋಮ್​ನಲ್ಲಿ ನಡೆದಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago