Latest

ಕೆಲಸದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ

ಕೆ ಶ್ರೀಜಾ (48) ವಯಕೋಮ್​ನ ಪೊಲಸ್ಸೆರಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸದ ಹೊರೆ ತಾಳಲಾರದೆ ಬಡ್ತಿ ರದ್ದುಗೊಳಿಸುವಂತೆ ಶಿಕ್ಷಣ ಸಚಿವರಿಗೆ ಶ್ರೀಜಾ ಅವರು ಮನವಿ ಮಾಡಿದ್ದರು. ಆದರೆ, ಮನವಿಯನ್ನು ತಿರಸ್ಕರಿಸಿದ ಪರಿಣಾಮ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಸಂಬಂಧಿಕರು ದೂರಿದ್ದಾರೆ.
ವೈಯಕಂ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ರೀಜಾ ಅವರು ಜೂ.1ರಂದು ಕೀಜೂರು ಜಿಎಲ್‌ಪಿಎಸ್‌ ಮುಖ್ಯೋಪಾಧ್ಯಾಯಿನಿಯಾಗಿ ಬಡ್ತಿ ಹೊಂದಿದ್ದರು. ಮರುದಿನವೇ ಕೆಲಸಕ್ಕೆ ಸೇರಿದ್ದರು. ಹೆಚ್ಚಿನ ಜವಾಬ್ದಾರಿಯುತ ಕೆಲಸದ ಒತ್ತಡ ತಾಳಲಾರದೆ ರಜೆ ತೆಗೆದುಕೊಂಡಿದ್ದರು. ಇದಾದ ಬಳಿಕ ಜುಲೈ 7 ರಂದು ಶಿಕ್ಷಣ ಸಚಿವರಿಗೆ ಅರ್ಜಿಯನ್ನು ಸಲ್ಲಿಸಿ ತನ್ನ ಪತಿಯ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಬಡ್ತಿಯನ್ನು ರದ್ದುಗೊಳಿಸುವಂತೆ ಕೇಳಿದ್ದರು. ಆಕೆ ಹಿಂದೆ ವೈಯಕಂನಲ್ಲಿ ಕೆಲಸ ಮಾಡುತ್ತಿದ್ದ ಶಾಲೆಯಲ್ಲಿ ಶಿಕ್ಷಕಿಯಾಗಿ ನೇಮಿಸಬೇಕೆಂಬುದು ಆಕೆಯ ಬೇಡಿಕೆಯಾಗಿತ್ತು. ಆದರೆ, ಅರ್ಜಿಯನ್ನು ಪರಿಗಣಿಸಲು ನಿಯಮದಲ್ಲಿ ಅವಕಾಶವಿಲ್ಲ ಎಂದು ಕುರವಿಲಂಗಾಡ್ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಜಾ ಅವರಿಗೆ ಉತ್ತರಿಸಿದ್ದರು.
ಮನವಿ ತಿರಸ್ಕರಿಸಿದ್ದರಿಂದ ತೀವ್ರವಾಗಿ ಮನನೊಂದಿದ್ದ ಶ್ರೀಜಾ ಕೆಲವು ದಿನಗಳವರೆಗೆ ಸರಿ ಹೋಗಬಹುದು ಅಂತಾ ಹೇಗೋ ಕೆಲಸ ಮಾಡಿಕೊಂಡು ಬಂದಿದ್ದರು. ಆದರೆ, ಕೆಲಸದ ಹೊರೆ ಕಡಿಮೆಯಾಗದ ಕಾರಣ, ತೀವ್ರವಾಗಿ ಮನನೊಂದು ಶುಕ್ರವಾರ ಆತ್ಮಹತ್ಯೆಯ ಮಾಡಿಕೊಂಡ ಘಟನೆ ಕೇರಳದ ವಯಕೋಮ್​ನಲ್ಲಿ ನಡೆದಿದೆ.

ಭ್ರಷ್ಟರ ಬೇಟೆ

Recent Posts

SSC 2026 ಭರ್ಜರಿ ನೇಮಕಾತಿ: 3,734 ಹುದ್ದೆಗಳು – ಮೇ 4ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…

4 hours ago

ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…

5 hours ago

ದೇವನಹಳ್ಳಿ: ಚಹಾ ಅಂಗಡಿ ಯುವಕನ ಮೇಲೆ ಪೊಲೀಸ್ ದೌರ್ಜನ್ಯ – ವೈರಲ್ ವಿಡಿಯೋಗೆ ಸಾರ್ವಜನಿಕರ ಆಕ್ರೋಶ

ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ‘ಹೈವೇ ನೆಸ್ಟ್’ ಚಹಾ ಅಂಗಡಿಯಲ್ಲಿ ನಡೆದ ದೌರ್ಜನ್ಯ ಪ್ರಕರಣ ಇದೀಗ…

8 hours ago

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

20 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

1 day ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

1 day ago