Latest

ಕೆಲಸದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ

ಕೆ ಶ್ರೀಜಾ (48) ವಯಕೋಮ್​ನ ಪೊಲಸ್ಸೆರಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸದ ಹೊರೆ ತಾಳಲಾರದೆ ಬಡ್ತಿ ರದ್ದುಗೊಳಿಸುವಂತೆ ಶಿಕ್ಷಣ ಸಚಿವರಿಗೆ ಶ್ರೀಜಾ ಅವರು ಮನವಿ ಮಾಡಿದ್ದರು. ಆದರೆ, ಮನವಿಯನ್ನು ತಿರಸ್ಕರಿಸಿದ ಪರಿಣಾಮ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಸಂಬಂಧಿಕರು ದೂರಿದ್ದಾರೆ.
ವೈಯಕಂ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ರೀಜಾ ಅವರು ಜೂ.1ರಂದು ಕೀಜೂರು ಜಿಎಲ್‌ಪಿಎಸ್‌ ಮುಖ್ಯೋಪಾಧ್ಯಾಯಿನಿಯಾಗಿ ಬಡ್ತಿ ಹೊಂದಿದ್ದರು. ಮರುದಿನವೇ ಕೆಲಸಕ್ಕೆ ಸೇರಿದ್ದರು. ಹೆಚ್ಚಿನ ಜವಾಬ್ದಾರಿಯುತ ಕೆಲಸದ ಒತ್ತಡ ತಾಳಲಾರದೆ ರಜೆ ತೆಗೆದುಕೊಂಡಿದ್ದರು. ಇದಾದ ಬಳಿಕ ಜುಲೈ 7 ರಂದು ಶಿಕ್ಷಣ ಸಚಿವರಿಗೆ ಅರ್ಜಿಯನ್ನು ಸಲ್ಲಿಸಿ ತನ್ನ ಪತಿಯ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಬಡ್ತಿಯನ್ನು ರದ್ದುಗೊಳಿಸುವಂತೆ ಕೇಳಿದ್ದರು. ಆಕೆ ಹಿಂದೆ ವೈಯಕಂನಲ್ಲಿ ಕೆಲಸ ಮಾಡುತ್ತಿದ್ದ ಶಾಲೆಯಲ್ಲಿ ಶಿಕ್ಷಕಿಯಾಗಿ ನೇಮಿಸಬೇಕೆಂಬುದು ಆಕೆಯ ಬೇಡಿಕೆಯಾಗಿತ್ತು. ಆದರೆ, ಅರ್ಜಿಯನ್ನು ಪರಿಗಣಿಸಲು ನಿಯಮದಲ್ಲಿ ಅವಕಾಶವಿಲ್ಲ ಎಂದು ಕುರವಿಲಂಗಾಡ್ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಜಾ ಅವರಿಗೆ ಉತ್ತರಿಸಿದ್ದರು.
ಮನವಿ ತಿರಸ್ಕರಿಸಿದ್ದರಿಂದ ತೀವ್ರವಾಗಿ ಮನನೊಂದಿದ್ದ ಶ್ರೀಜಾ ಕೆಲವು ದಿನಗಳವರೆಗೆ ಸರಿ ಹೋಗಬಹುದು ಅಂತಾ ಹೇಗೋ ಕೆಲಸ ಮಾಡಿಕೊಂಡು ಬಂದಿದ್ದರು. ಆದರೆ, ಕೆಲಸದ ಹೊರೆ ಕಡಿಮೆಯಾಗದ ಕಾರಣ, ತೀವ್ರವಾಗಿ ಮನನೊಂದು ಶುಕ್ರವಾರ ಆತ್ಮಹತ್ಯೆಯ ಮಾಡಿಕೊಂಡ ಘಟನೆ ಕೇರಳದ ವಯಕೋಮ್​ನಲ್ಲಿ ನಡೆದಿದೆ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

13 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

13 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

13 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

13 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

13 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

13 hours ago