ಇಂಡಿ: ತಾಲೂಕಿನ ಬುಯ್ಯಾರ ಗ್ರಾಮದಲ್ಲಿ ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ! ನಿನ್ನೆ ಸಾಯಂಕಾಲ ಸುಮಾರು ಆರು ಗಂಟೆಗೆ ಕ್ಷುಲ್ಲಕ ಕಾರಣಕ್ಕಾಗಿ ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ದಲಿತ ಯುವಕ ತಾನು ತನ್ನ ಶರ್ಟ್ ಕಾಲರ್ ಅನ್ನು ಸರಿಪಡಿಸಿ ಕೊಳ್ಳುವ ಸಮಯದಲ್ಲಿ, ಊರಿನ ಕೆಲವು ಸವರ್ಣಿಯರ ಗುಂಪೊಂದು, ನಮಗೆ ನೋಡಿ ಶರ್ಟ್ ಕಾಲರ ಏರಿಸುತ್ತಿಯಾ.?, ಎಂದು ಅವಾಚ್ಯವಾಗಿ ಬೈದು, ಜಾತಿ ನಿಂದನೆ ಮಾಡಿ ಹಿಗ್ಗಾ ಮುಗ್ಗ ಥಳಿಸಿರುವ ಘಟನೆ ಬುಯ್ಯಾರ ಗ್ರಾಮದಲ್ಲಿ ನಡೆದಿದೆ.
ಅದಲ್ಲದೆ ಪಿಸ್ತೂಲ್ ಗನ್, ಮಚ್ಚು, ತೋರಿಸಿ. ನೀನೇನಾದರಾ ಪೊಲೀಸ್ ಹತ್ರ ಹೋದ್ರೆ ನಿನಗೂ ನಿನ್ನ್ ತಮ್ಮನಿಗೂ ಶೂಟ್ ಮಾಡುತ್ತೇನೆ ಎಂದು ಧಮ್ಕಿ ಹಾಕಿರುವ ಬಗ್ಗೆ ಸ್ವತಃ ಯುವಕನೇ ಹೇಳಿಕೊಂಡಿದ್ದಾನೆ. ಹಾಗೂ ಜಾತಿ ನಿಂದನೆ, ಮಾಡುವ ಜನರು ಇನ್ನು ಈ ದೇಶದಲ್ಲಿ ಇದಾರಾ… ಎಂದು ನೊಂದ ಯುವಕರು ಕೇಳಿದರೆ.
ನಾವು ಮೊದಲಾದರೂ ಒಂದು ಸಲ. ಅವರ ಮೇಲೆ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರುಕೊಟ್ಟಿರುತ್ತೇವೆ. ನಿನ್ನೆ ಸಹ ತಳವಾರ ಸಮಾಜದ ಯುವಕರ ಮೇಲೆ ಅಂದರೆ ಮಲ್ಲು ಕುಮಸಗಿ, ಪ್ರೀತಮ ಕುಮಸಗಿ, ರವಿ ಪಂಚಾಯತಿ. ಮಂಜುನಾಥ ಪಂಚಾಯತಿ, ಸಚಿನ ನಾಟಿಕಾರ, ಪರಶುರಾಮ ನಾಟಿಕಾರ, ರವಿ ದೊಡ್ಡಮನಿ, ಇನ್ನು ಅನೇಕರ ಮೇಲೆ ದೂರು ಕೊಟ್ಟಿದ್ದೇವೆ, ಆದರು ಇನ್ನು ಕ್ರಮ ಕೈಗೊಂಡಿಲ್ಲ. ಇದೆ ರೀತಿ ಆದರೆ ನಾವು ವಿಜಯಪುರ ಎಸ್, ಪಿ ಆಫೀಸ್ ಗೆ ಹೋಗುತ್ತೇವೆ ಎಂದು. ನೊಂದ ರೇವಮ್ಮ ಅರಕೇರಿ, ಆಕಾಶ ಅರಕೇರಿ, ಶ್ರೀಕಾಂತ ಅರಕೇರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ವರದಿ:ಸಂಗಪ್ಪ ಚಲವಾದಿ
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನಲ್ಲಿ ದನಗಳ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಖಚಿತ ಮಾಹಿತಿ ಮೇರೆಗೆ ಮಂಗಳವಾರ ಬಂದಿಸಿದ್ದಾರೆ.ಡಿವೈಎಸ್ಪಿ ಮಲ್ಲೇಶ್…
ಸ್ಯಾಂಡಲ್ವುಡ್ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಹಾಗೂ ನಿರ್ದೇಶಕ ಪ್ರೇಮ್ ಸಾರಥ್ಯದ ಬಹುನಿರೀಕ್ಷಿತ ‘ಕೆಡಿ: ದಿ ಡೆವಿಲ್’ ಚಿತ್ರಕ್ಕೆ…
ಈದ್ ಹಬ್ಬದ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಹೈದರಾಬಾದ್ನ ಸೈಯದ್ ಅಯೂಬ್ ಎಂಬಾತನ ವಿಡಿಯೋ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ‘ಹೈದರಾಬಾದ್…
ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಭಾರತ ಸೇರಿದಂತೆ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು…
ಮೂಡಬಿದಿರೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಮಂಗಳೂರು…
ಪ್ರಧಾನಿ ನರೇಂದ್ರ ಮೋದಿ ಅವರ ಮಾತಿನ ಶೈಲಿಯನ್ನು ಅಣಕಿಸಿ ಅಡುಗೆ ಅನಿಲ (LPG) ಬೆಲೆ ಏರಿಕೆಯನ್ನು ವ್ಯಂಗ್ಯಾತ್ಮಕವಾಗಿ ಹೇಳಿಕೊಂಡಿದ್ದ ಸರ್ಕಾರಿ…