ಇಂಡಿ: ತಾಲೂಕಿನ ಬುಯ್ಯಾರ ಗ್ರಾಮದಲ್ಲಿ ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ! ನಿನ್ನೆ ಸಾಯಂಕಾಲ ಸುಮಾರು ಆರು ಗಂಟೆಗೆ ಕ್ಷುಲ್ಲಕ ಕಾರಣಕ್ಕಾಗಿ ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ದಲಿತ ಯುವಕ ತಾನು ತನ್ನ ಶರ್ಟ್ ಕಾಲರ್ ಅನ್ನು ಸರಿಪಡಿಸಿ ಕೊಳ್ಳುವ ಸಮಯದಲ್ಲಿ, ಊರಿನ ಕೆಲವು ಸವರ್ಣಿಯರ ಗುಂಪೊಂದು, ನಮಗೆ ನೋಡಿ ಶರ್ಟ್ ಕಾಲರ ಏರಿಸುತ್ತಿಯಾ.?, ಎಂದು ಅವಾಚ್ಯವಾಗಿ ಬೈದು, ಜಾತಿ ನಿಂದನೆ ಮಾಡಿ ಹಿಗ್ಗಾ ಮುಗ್ಗ ಥಳಿಸಿರುವ ಘಟನೆ ಬುಯ್ಯಾರ ಗ್ರಾಮದಲ್ಲಿ ನಡೆದಿದೆ.
ಅದಲ್ಲದೆ ಪಿಸ್ತೂಲ್ ಗನ್, ಮಚ್ಚು, ತೋರಿಸಿ. ನೀನೇನಾದರಾ ಪೊಲೀಸ್ ಹತ್ರ ಹೋದ್ರೆ ನಿನಗೂ ನಿನ್ನ್ ತಮ್ಮನಿಗೂ ಶೂಟ್ ಮಾಡುತ್ತೇನೆ ಎಂದು ಧಮ್ಕಿ ಹಾಕಿರುವ ಬಗ್ಗೆ ಸ್ವತಃ ಯುವಕನೇ ಹೇಳಿಕೊಂಡಿದ್ದಾನೆ. ಹಾಗೂ ಜಾತಿ ನಿಂದನೆ, ಮಾಡುವ ಜನರು ಇನ್ನು ಈ ದೇಶದಲ್ಲಿ ಇದಾರಾ… ಎಂದು ನೊಂದ ಯುವಕರು ಕೇಳಿದರೆ.
ನಾವು ಮೊದಲಾದರೂ ಒಂದು ಸಲ. ಅವರ ಮೇಲೆ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರುಕೊಟ್ಟಿರುತ್ತೇವೆ. ನಿನ್ನೆ ಸಹ ತಳವಾರ ಸಮಾಜದ ಯುವಕರ ಮೇಲೆ ಅಂದರೆ ಮಲ್ಲು ಕುಮಸಗಿ, ಪ್ರೀತಮ ಕುಮಸಗಿ, ರವಿ ಪಂಚಾಯತಿ. ಮಂಜುನಾಥ ಪಂಚಾಯತಿ, ಸಚಿನ ನಾಟಿಕಾರ, ಪರಶುರಾಮ ನಾಟಿಕಾರ, ರವಿ ದೊಡ್ಡಮನಿ, ಇನ್ನು ಅನೇಕರ ಮೇಲೆ ದೂರು ಕೊಟ್ಟಿದ್ದೇವೆ, ಆದರು ಇನ್ನು ಕ್ರಮ ಕೈಗೊಂಡಿಲ್ಲ. ಇದೆ ರೀತಿ ಆದರೆ ನಾವು ವಿಜಯಪುರ ಎಸ್, ಪಿ ಆಫೀಸ್ ಗೆ ಹೋಗುತ್ತೇವೆ ಎಂದು. ನೊಂದ ರೇವಮ್ಮ ಅರಕೇರಿ, ಆಕಾಶ ಅರಕೇರಿ, ಶ್ರೀಕಾಂತ ಅರಕೇರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ವರದಿ:ಸಂಗಪ್ಪ ಚಲವಾದಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…