ಇಂಡಿ: ತಾಲೂಕಿನ ಬುಯ್ಯಾರ ಗ್ರಾಮದಲ್ಲಿ ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ! ನಿನ್ನೆ ಸಾಯಂಕಾಲ ಸುಮಾರು ಆರು ಗಂಟೆಗೆ ಕ್ಷುಲ್ಲಕ ಕಾರಣಕ್ಕಾಗಿ ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ದಲಿತ ಯುವಕ ತಾನು ತನ್ನ ಶರ್ಟ್ ಕಾಲರ್ ಅನ್ನು ಸರಿಪಡಿಸಿ ಕೊಳ್ಳುವ ಸಮಯದಲ್ಲಿ, ಊರಿನ ಕೆಲವು ಸವರ್ಣಿಯರ ಗುಂಪೊಂದು, ನಮಗೆ ನೋಡಿ ಶರ್ಟ್ ಕಾಲರ ಏರಿಸುತ್ತಿಯಾ.?, ಎಂದು ಅವಾಚ್ಯವಾಗಿ ಬೈದು, ಜಾತಿ ನಿಂದನೆ ಮಾಡಿ ಹಿಗ್ಗಾ ಮುಗ್ಗ ಥಳಿಸಿರುವ ಘಟನೆ ಬುಯ್ಯಾರ ಗ್ರಾಮದಲ್ಲಿ ನಡೆದಿದೆ.
ಅದಲ್ಲದೆ ಪಿಸ್ತೂಲ್ ಗನ್, ಮಚ್ಚು, ತೋರಿಸಿ. ನೀನೇನಾದರಾ ಪೊಲೀಸ್ ಹತ್ರ ಹೋದ್ರೆ ನಿನಗೂ ನಿನ್ನ್ ತಮ್ಮನಿಗೂ ಶೂಟ್ ಮಾಡುತ್ತೇನೆ ಎಂದು ಧಮ್ಕಿ ಹಾಕಿರುವ ಬಗ್ಗೆ ಸ್ವತಃ ಯುವಕನೇ ಹೇಳಿಕೊಂಡಿದ್ದಾನೆ. ಹಾಗೂ ಜಾತಿ ನಿಂದನೆ, ಮಾಡುವ ಜನರು ಇನ್ನು ಈ ದೇಶದಲ್ಲಿ ಇದಾರಾ… ಎಂದು ನೊಂದ ಯುವಕರು ಕೇಳಿದರೆ.
ನಾವು ಮೊದಲಾದರೂ ಒಂದು ಸಲ. ಅವರ ಮೇಲೆ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರುಕೊಟ್ಟಿರುತ್ತೇವೆ. ನಿನ್ನೆ ಸಹ ತಳವಾರ ಸಮಾಜದ ಯುವಕರ ಮೇಲೆ ಅಂದರೆ ಮಲ್ಲು ಕುಮಸಗಿ, ಪ್ರೀತಮ ಕುಮಸಗಿ, ರವಿ ಪಂಚಾಯತಿ. ಮಂಜುನಾಥ ಪಂಚಾಯತಿ, ಸಚಿನ ನಾಟಿಕಾರ, ಪರಶುರಾಮ ನಾಟಿಕಾರ, ರವಿ ದೊಡ್ಡಮನಿ, ಇನ್ನು ಅನೇಕರ ಮೇಲೆ ದೂರು ಕೊಟ್ಟಿದ್ದೇವೆ, ಆದರು ಇನ್ನು ಕ್ರಮ ಕೈಗೊಂಡಿಲ್ಲ. ಇದೆ ರೀತಿ ಆದರೆ ನಾವು ವಿಜಯಪುರ ಎಸ್, ಪಿ ಆಫೀಸ್ ಗೆ ಹೋಗುತ್ತೇವೆ ಎಂದು. ನೊಂದ ರೇವಮ್ಮ ಅರಕೇರಿ, ಆಕಾಶ ಅರಕೇರಿ, ಶ್ರೀಕಾಂತ ಅರಕೇರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ವರದಿ:ಸಂಗಪ್ಪ ಚಲವಾದಿ
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…