ಮೈಸೂರು: ಮೈಸೂರಿನ ಸಾಹುಕಾರ್ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ನವಜಾತ ಶಿಶುವನ್ನು ಬಟ್ಟೆ ಸುತ್ತಿ ಬಾವಿಗೆ ಎಸೆದ ಘಟನೆ ಬೆಳಕಿಗೆ ಬಂದಿದೆ.
ಗಂಡು ಮಗುವನ್ನು ಬಟ್ಟೆಯಲ್ಲಿ ಸುತ್ತಿ, ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಬಿಸಾಡಿ ಹೋಗಿರುವ ಘಟನೆ ಕೃತ್ಯವೆಂದು ಸ್ಥಳೀಯರು ತಿಳಿಸಿದ್ದಾರೆ. ಬೆಳಿಗ್ಗೆ ಜಮೀನಿಗೆ ತೆರಳಿದ ಸ್ಥಳೀಯರು, ಮಗುವಿನ ಅಳುವಿನ ಶಬ್ದ ಕೇಳಿ ಅಲ್ಲಿಗೆ ಧಾವಿಸಿದರು. ಕೂಡಲೇ ಮಗುವನ್ನು ಹೊಂಡದಿಂದ ಹೊರತೆಗೆಯಲು ಯಶಸ್ವಿಯಾದರು.
ಸ್ಥಳೀಯರು ಮಗುವನ್ನು ರಕ್ಷಿಸಿದರೂ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ನವಜಾತ ಶಿಶು ಕೊನೆಯುಸಿರೆಳೆದಿದೆ. ಈ ಘಟನೆ ಸಂಬಂಧಿಸಿ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಕಾರಣರಾದವರ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಘಟನೆ ಗ್ರಾಮದಲ್ಲಿ ಆಘಾತವನ್ನು ಮೂಡಿಸಿದೆ ಮತ್ತು ನವಜಾತ ಶಿಶುವಿನ ಜೀವನವನ್ನು ಉಳಿಸಲು ಸಾಧ್ಯವಾಗದೆ ಜನರು ವಿಷಾದ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…