Latest

ಪತ್ನಿಯನ್ನು ಜೀವಂತ ಸಮಾಧಿ ಮಾಡಿದ್ದ ಪತಿ: ʻApple Watchʼ ನಿಂದ ಉಳಿಯಿತು ಜೀವ

ಯುಎಸ್‌ನ ವಾಷಿಂಗ್ಟನ್‌ನಲ್ಲಿ ಪತಿಯೊಬ್ಬ ತನ್ನ ಹೆಂಡತಿಯನ್ನು ಚಾಕುವಿನಿಂದ ಇರಿದು ಜೀವಂತವಾಗಿ ಸಮಾಧಿ ಮಾಡಿದ್ದು, ಆಕೆ ತನ್ನ ʻApple Watchʼ ನಿಂದ 911 ಗೆ ಕರೆ ಮಾಡಿ ತನ್ನ ಪ್ರಾಣ ಉಳಿಸಿಕೊಂಡರುವ ಘಟನೆ ನಡೆದಿದೆ.
ಈ ಘಟನೆಯು ಅಕ್ಟೋಬರ್ 16 ರಂದು ಮಧ್ಯಾಹ್ನ ಸಂಭವಿಸಿದೆ. 42 ವರ್ಷದ ಪತ್ನಿಯನ್ನು ಚಾಕುವಿನಿಂದ ಇರಿದು, ಆಕೆಯ ಕೈಯನ್ನು ಕಟ್ಟಿ ಹಾಕಿ ಕಾಡಿನಲ್ಲಿ ಜೀವಂತವಾಗಿ ಸಮಾಧಿಯಲ್ಲಿ ಹೂತಿದ್ದಾನೆ. ಆದರೆ, ಮಹಿಳೆ ಸಮಾಧಿಯ ಮಣ್ಣನ್ನು ತೆಗೆದು ಹೊರಬಂದಿದ್ದು, ತನ್ನ ಕೈಯಿಗೆ ಕಟ್ಟಿದ್ದ ಆಯಪಲ್ ವಾಚ್‌ನಿಂದ 911 ಗೆ ಕರೆ ಮಾಡಿ ಸಹಾಯ ಕೋರಿದ್ದಾಳೆ ಎಂದು ತಿಳಿದುಬಂದಿದೆ.
ಕರೆ ನಂತರ, ಮಹಿಳೆಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಹಿಳೆಯನ್ನು ಆಕೆಯ ಪತಿಯೇ ತನ್ನ ಮನೆಯಿಂದ ಅಪಹರಿಸಿದ್ದಾನೆ ಎಂದು ಆಕೆ ಮಾಹಿತಿ ನೀಡಿದ್ದಾಳೆ. ತನ್ನ ನಿವೃತ್ತಿ ಹಣವನ್ನು ನೀಡುವುದಕ್ಕಿಂತ ನಿನ್ನನ್ನು ಕೊಲ್ಲುವುದಾಗಿ ಆತ ಹೇಳಿದ್ದ ಎಂದೂ ಮಹಿಳೆ ಬಹಿರಂಗಪಡಿಸಿದ್ದಾಳೆ.
42 ವರ್ಷದ ಯಂಗ್ ಸೂಕ್ ಆನ್ 53 ವರ್ಷ ವಯಸ್ಸಿನ ಚೇ ಕ್ಯೋಂಗ್ ಆನ್ ಅವರನ್ನು ವಿವಾಹವಾಗಿದ್ದಾಳೆ. ಇವರಿಗೆ ಒಬ್ಬಳು ಮಗಳೂ ಕೂಡ ಇದ್ದಾಳೆ.
ಅಕ್ಟೋಬರ್ 16 ರ ಭಾನುವಾರ ಮಧ್ಯಾಹ್ನ 1.00 ಗಂಟೆಗೆ ಪತ್ನಿಯ ಮನೆಗೆ ಬಂದ ಪತಿ ಆಕೆಯೊಂದಿಗೆ ಜಗಳವಾಡಿದ್ದಾನೆ. ಇವರಿಬ್ಬರೂ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಹಣ ನೀಡುವ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago