Latest

ಪತ್ನಿಯನ್ನು ಜೀವಂತ ಸಮಾಧಿ ಮಾಡಿದ್ದ ಪತಿ: ʻApple Watchʼ ನಿಂದ ಉಳಿಯಿತು ಜೀವ

ಯುಎಸ್‌ನ ವಾಷಿಂಗ್ಟನ್‌ನಲ್ಲಿ ಪತಿಯೊಬ್ಬ ತನ್ನ ಹೆಂಡತಿಯನ್ನು ಚಾಕುವಿನಿಂದ ಇರಿದು ಜೀವಂತವಾಗಿ ಸಮಾಧಿ ಮಾಡಿದ್ದು, ಆಕೆ ತನ್ನ ʻApple Watchʼ ನಿಂದ 911 ಗೆ ಕರೆ ಮಾಡಿ ತನ್ನ ಪ್ರಾಣ ಉಳಿಸಿಕೊಂಡರುವ ಘಟನೆ ನಡೆದಿದೆ.
ಈ ಘಟನೆಯು ಅಕ್ಟೋಬರ್ 16 ರಂದು ಮಧ್ಯಾಹ್ನ ಸಂಭವಿಸಿದೆ. 42 ವರ್ಷದ ಪತ್ನಿಯನ್ನು ಚಾಕುವಿನಿಂದ ಇರಿದು, ಆಕೆಯ ಕೈಯನ್ನು ಕಟ್ಟಿ ಹಾಕಿ ಕಾಡಿನಲ್ಲಿ ಜೀವಂತವಾಗಿ ಸಮಾಧಿಯಲ್ಲಿ ಹೂತಿದ್ದಾನೆ. ಆದರೆ, ಮಹಿಳೆ ಸಮಾಧಿಯ ಮಣ್ಣನ್ನು ತೆಗೆದು ಹೊರಬಂದಿದ್ದು, ತನ್ನ ಕೈಯಿಗೆ ಕಟ್ಟಿದ್ದ ಆಯಪಲ್ ವಾಚ್‌ನಿಂದ 911 ಗೆ ಕರೆ ಮಾಡಿ ಸಹಾಯ ಕೋರಿದ್ದಾಳೆ ಎಂದು ತಿಳಿದುಬಂದಿದೆ.
ಕರೆ ನಂತರ, ಮಹಿಳೆಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಹಿಳೆಯನ್ನು ಆಕೆಯ ಪತಿಯೇ ತನ್ನ ಮನೆಯಿಂದ ಅಪಹರಿಸಿದ್ದಾನೆ ಎಂದು ಆಕೆ ಮಾಹಿತಿ ನೀಡಿದ್ದಾಳೆ. ತನ್ನ ನಿವೃತ್ತಿ ಹಣವನ್ನು ನೀಡುವುದಕ್ಕಿಂತ ನಿನ್ನನ್ನು ಕೊಲ್ಲುವುದಾಗಿ ಆತ ಹೇಳಿದ್ದ ಎಂದೂ ಮಹಿಳೆ ಬಹಿರಂಗಪಡಿಸಿದ್ದಾಳೆ.
42 ವರ್ಷದ ಯಂಗ್ ಸೂಕ್ ಆನ್ 53 ವರ್ಷ ವಯಸ್ಸಿನ ಚೇ ಕ್ಯೋಂಗ್ ಆನ್ ಅವರನ್ನು ವಿವಾಹವಾಗಿದ್ದಾಳೆ. ಇವರಿಗೆ ಒಬ್ಬಳು ಮಗಳೂ ಕೂಡ ಇದ್ದಾಳೆ.
ಅಕ್ಟೋಬರ್ 16 ರ ಭಾನುವಾರ ಮಧ್ಯಾಹ್ನ 1.00 ಗಂಟೆಗೆ ಪತ್ನಿಯ ಮನೆಗೆ ಬಂದ ಪತಿ ಆಕೆಯೊಂದಿಗೆ ಜಗಳವಾಡಿದ್ದಾನೆ. ಇವರಿಬ್ಬರೂ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಹಣ ನೀಡುವ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

1 hour ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

1 hour ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

21 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago