Crime

ಬುದ್ಧಿವಾದಕ್ಕೆ ಚಾಕು ಹೊಡೆತ – ಜಮಾತ್ ಮುಖಂಡನ ಮೇಲೆ ಕೊಲೆ ಯತ್ನ

ಹುಬ್ಬಳ್ಳಿ: ಸಮುದಾಯಿಕ ಸೌಹಾರ್ದಕ್ಕೆ ಕಲಂಕವಾಗುವಂತ ಘಟನೆ ಗುರುವಾರ ತಡರಾತ್ರಿ ಹುಬ್ಬಳ್ಳಿಯ ಹಳೇ ನಗರದಲ್ಲಿ ನಡೆದಿದೆ. ಕಿಚಡಿ ನುಭವವನ್ನು ವಿಕೃತಗೊಳಿಸಿ ಗಲಾಟೆ ಸೃಷ್ಟಿಸಿದ್ದ ಕೆಲ ಯುವಕರು, ಶಾಂತಿಯುತವಾಗಿ ಬುದ್ಧಿವಾದ ನೀಡಿದ್ದ ಜಮಾತ್ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಾಟಕೀಯ ಬೆಳವಣಿಗೆಯಾಗಿ ರೂಪುಗೊಂಡಿದೆ.

ಈ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇಪಾರಿ ಪ್ಲಾಟ್ ಪ್ರದೇಶದಲ್ಲಿ ಸಂಭವಿಸಿದೆ. ರವಿವಾರ ದಿನ ಮುಸ್ಲಿಂ ಸಮುದಾಯದವರಿಂದ ಆಯೋಜಿಸಲಾಗಿದ್ದ ಕಿಚಡಿ ವಿತರಣಾ ಕಾರ್ಯಕ್ರಮದಲ್ಲಿ, ಧಾರವಾಡ ಮೂಲದ ಅಲ್ತಾಫ್ ಹಾಗೂ ಆತನ ಗೆಳೆಯರು ಕ್ಷುಲ್ಲಕ ಕಾರಣಕ್ಕೆ ಗಲಾಟೆ ಉಂಟುಮಾಡಿದ್ದರು. ಇದರಿಂದ ಅಸಮಾಧಾನಗೊಂಡ ಜಮಾತ್ ಮುಖಂಡ ಸಾಧಿಕ್, ಗಲಾಟೆ ಮಾಡುತ್ತಿದ್ದವರನ್ನು ಶಾಂತವಾಗಿ ಬುದ್ದಿವಾದ ನೀಡಿ ಕಾರ್ಯಕ್ರಮದ ಶಿಸ್ತನ್ನು ಕಾಪಾಡಲು ಪ್ರಯತ್ನಿಸಿದ್ದರು.

ಆದರೆ ಈ ಮಾತಿಗೆ ಕೆರಳಿದ ಅಲ್ತಾಫ್ ಮತ್ತು ಆತನ ತಂಡ ಸೋಮವಾರ ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಸಾಧಿಕ್ ಅವರ ಮೇಲೆ ಮುಂಚಿತ ಯೋಚನೆಯೊಂದಿಗೆ ದಾಳಿ ನಡೆಸಿ, ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಸಾಧಿಕ್ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ತಕ್ಷಣದ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಅವರ ಸ್ಥಿತಿ ಸದ್ಯ ಸ್ಥಿರವಾಗಿದೆ.

ಈ ಘಟನೆ ಬೆನ್ನಲ್ಲೇ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಅವರು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಸಮಾಜದಲ್ಲಿ ಭಯೋತ್ಪಾದಕ ವಾತಾವರಣ ಉಂಟುಮಾಡುವಂತಹ ಈ ರೀತಿಯ ಗಂಭೀರ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

2 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

2 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

17 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

17 hours ago