ಬೆಂಗಳೂರು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್ ಒಂದರಲ್ಲಿ ಜು.22 ಬೆಳಗ್ಗೆ ವಕೀಲೆಗೆ ಚಾಕು ಇರಿದು ಕೊಲೆಗೆ ಯತ್ನಿಸಲಾಗಿದೆ. ಕೂಡಲೆ ಹಲಸೂರು ಗೇಟ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ. ಜಯರಾಮರೆಡ್ಡಿ ಚಾಕು ಇರಿದ ಆರೋಪಿ.
ವಕೀಲೆ ವಿಮಲಾ ಮತ್ತು ಆರೋಪಿ ಜಯರಾಮ ಸ್ನೇಹಿತರು. ವಕೀಲೆ ವಿಮಲಾ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ಜಯರಾಮ ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೆ ಜಯರಾಮ ಸ್ನೇಹಿತೆ ವಿಮಲಾ ಬಳಿಯಿಂದ ಹಂತಹಂತವಾಗಿ ಒಂದೂವರೆ ಕೋಟಿಗಿಂತಲೂ ಹೆಚ್ಚು ಹಣ ಪಡೆದಿದ್ದಾನೆ. ನಂತರ ಹೆಜ್ಜಾಲ ಬಳಿ ಇರುವ ಜಾಗದ ವಿಚಾರವಾಗಿ ಇಬ್ಬರಲ್ಲಿ ಕಿರಿಕ್ ಆಗಿತ್ತು.
ಬಳಿಕ ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು ಜಾಗದ ವಿಚಾರವಾಗಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ ಇಬ್ಬರೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆರೋಪಿ ಜಯರಾಮ ಸ್ನೇಹಿತೆ ವಿಮಲಾಗೆ ಕೋರ್ಟ್ ಹಾಲ್ 1ರಲ್ಲಿ ಚಾಕು ಇರಿದಿದ್ದಾನೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…