Latest

ಸ್ನೇಹಿತನಿಗೆ ಕೊಡಿಸಿದ ಸಾಲ ತಂದ ಆಪತ್ತು.! ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ.!

ನಂಜನಗೂಡು ; ಸ್ನೇಹಿತನಿಗೆ ಖಾಸಗಿ ಬ್ಯಾಂಕ್ ನಲ್ಲಿ ಕೊಡಿಸಿದ ಸಾಲ ವ್ಯಕ್ತಿಗೆ ಮುಳುವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ತಾಲೂಕು ದಂಡೀಕೆರೆ ಗ್ರಾಮದ ಬಳಿ ನಡೆದಿದೆ.
ನಂಜನಗೂಡು ತಾಲೂಕು ಮಲ್ಲೂಪುರ ಗ್ರಾಮದ ಸಿದ್ದೇಶ್(40) ಮೃತ ದುರ್ದೈವಿ. ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಸಿದ್ದೇಶ್ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿ ತಾನು ಮಾಡಿದ ತಪ್ಪಿಗಾಗಿ ಪತ್ನಿ‌, ಮಕ್ಕಳು, ತಂದೆ, ತಾಯಿ ಸಹೋದರನಿಗೆ ಕ್ಷಮೆಯಾಚಿಸಿದ್ದಾರೆ.
ಸಿದ್ದೇಶ್ ತನ್ನ ಹೆಸರಲ್ಲಿ ಸ್ನೇಹಿತನಿಗೆ ಖಾಸಗಿ ಐಸಿಐಸಿಐ ಬ್ಯಾಂಕ್ ನಲ್ಲಿ ತನ್ನ ದಾಖಲೆಗಳನ್ನು ನೀಡಿ ಕಾರು ಖರೀದಿಸಲು ಸಾಲ ಕೊಡಿಸಿದ್ದಾರೆ.ಜೊತೆಗೆ ಪರಿಚಯದವರಿಂದ 2 ಲಕ್ಷ ಕೈ ಸಾಲವನ್ನೂ ಸಹ ಕೊಡಿಸಿದ್ದಾರೆ.ಸ್ನೇಹಿತ ಉಪ್ಪಿನ ಹಳ್ಳಿ ಗ್ರಾಮದ ಮಣಿಕಂಠ ಸಾಲ ತೀರಿಸುವಲ್ಲಿ ವಿಫಲವಾಗಿದ್ದಾನೆ.ಬ್ಯಾಂಕ್ ಸಿಬ್ಬಂದಿಗಳು ಸಾಲ ತೀರಿಸುವಂತೆ ಮೃತ ವ್ಯಕ್ತಿ ಮಲ್ಲುಪುರ ಗ್ರಾಮದ ಸಿದ್ದೇಶ್ ಮೇಲೆ ಒತ್ತಡ ಹೇರಿದ್ದಾರೆ.ಇದರಿಂದ
ಮನನೊಂದ ಸಿದ್ದೇಶ್ ಮೈಸೂರು ತಾಲೂಕಿನ ವರುಣ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ದಂಡಿಕೇರಿ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ . ತಮಗಾದ ನೋವನ್ನ ಸಿದ್ದೇಶ್ ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿ ಆತ್ಮೀಯ ಸ್ನೇಹಿತನಿಗೆ ಸಹಾಯ ಮಾಡಲು ಹೋಗಿ ಬಹಳ ಸಂಕಷ್ಟಕ್ಕೆ ಸಿಲುಕಿ ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳ ಸಾಲದ ಕಿರುಕುಳದಿಂದಾಗಿ ಇಂದು ಆತ್ಮಹತ್ಯೆ ದಾರಿ ಹಿಡಿಯುವಂತಾಗಿದೆ ಎಂದು ಮನನೊಂದು ತಮ್ಮ ಅಳಲು ತೋಡಿಕೊಂಡಿದ್ದಾರೆ

ಘಟನೆ ವಿವರ
ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮದ ಮೃತ ಸಿದ್ದೇಶ್ ಎಂಬವರು ಬಣ್ಣಾರಿ ಅಮ್ನನ್ ಶುಗರ್ ಕಾರ್ಖಾನೆ ಮುಂಭಾಗ ಕ್ಯಾಂಟೀನ್ ನಡೆಸುತ್ತಿದ್ದರು ಇದರಿಂದ ವ್ಯಾಪಾರ ವಹಿವಾಟು ಚೆನ್ನಾಗಿ ನಡೆದು ಸಿದ್ದೇಶ್ ಆರ್ಥಿಕವಾಗಿ ಸ್ವಲ್ಪ ಸದೃಢವಾಗಿದ್ದರು ಎನ್ನಲಾಗಿದೆ.
ಅಷ್ಟರಲ್ಲಿ ಉಪ್ಪಿನ ಹಳ್ಳಿ ಗ್ರಾಮದ ಗಾರೆ ಕೆಲಸ ಮಾಡುವ ಮಣಿಕಂಠ ಎಂಬುವವರು ಪರಿಚಯವಾಗಿ ನಂತರ ಆತ್ಮೀಯ ಸ್ನೇಹಿತರಾಗಿದ್ದರು
ಸ್ನೇಹಿತ ಮಣಿಕಂಠ ಲೋನ್ ಮುಖಾಂತರ ಕಾರು ತೆಗೆದುಕೊಳ್ಳಬೇಕು ಎಂದು ಸಿದ್ದೇಶ್ ಅವರಲ್ಲಿ ಕೇಳಿಕೊಂಡಿದ್ದ ಸ್ನೇಹಿತರಿಬ್ಬರೂ ಮೈಸೂರಿನ ಕಾರು ಶೋರೂಮ್ ಗೆ ಹೋಗಿ ಸಾಲದ ರೂಪದಲ್ಲಿ ಕಾರು ಖರೀದಿಸಲು ಮಾಹಿತಿ ಪಡೆದಿದ್ದಾರೆ. ಕಾರು ಖರೀದಿಸಲು ಮಣಿಕಂಠ ಅವರ ಸಿವಿಲ್ ಸ್ಕೋರ್ ಗೆ ಲೋನ್ ಕೊಡುವುದಕ್ಕಾಗುವುದಿಲ್ಲ ಎಂದಾಗ ಸಿದ್ದೇಶ್ ಅವರು ತಮ್ಮ ದಾಖಲಾತಿ ನೀಡಿ ಅವರ ಹೆಸರಿನಲ್ಲಿ ಕಾರಿನ ಸಾಲ ಕೊಡಿಸಿರುತ್ತಾರೆ. ಅದು ಅಲ್ಲದೆ ಬೇರೆ ಬೇರೆ ಖಾಸಗಿ ವ್ಯಕ್ತಿಗಳಿಂದಲೂ ಸಿದ್ದೇಶ್ ಅವರು ತಮ್ಮ ಚೆಕ್ ನೀಡಿ ಮಣಿಕಂಠನಿಗೆ ಎರಡು ಲಕ್ಷ ಕೈ ಸಾಲವನ್ನು ಕೊಡಿಸಿರುತ್ತಾರೆ ಆದರೆ ಸಾಲ ಪಡೆದ ಸ್ನೇಹಿತ ಮಣಿಕಂಠ ಕಾರಿನ ಸಾಲದ ಕಂತು ಕಟ್ಟದೆ ಖಾಸಗಿಯವರ ಸಾಲವನ್ನು ತೀರಿಸದೆ ಮಿತ್ರ ದ್ರೋಹ ಮಾಡಿದ ಕಾರಣ ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳು ಸಿದ್ದೇಶ್ ಅವರ ಮೇಲೆ ಸಾಲ ಕಟ್ಟುವಂತೆ ಒತ್ತಡ ಹೇರಿ ಮಾನಸಿಕ ಹಿಂಸೆ ನೀಡುತ್ತಿದ್ದ ಹಿನ್ನೆಲೆ ಸಿದ್ದೇಶ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ತನ್ನ ಸೆಲ್ಫಿ ವಿಡಿಯೋದಲ್ಲಿ ಸಂಕ್ಷಿಪ್ತವಾಗಿ ತಿಳಿಸಿದ್ದಾರೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಮೋಹನ್

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

8 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

8 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

8 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

8 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

9 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

9 hours ago