Categories: CrimeLatest

ರಾಂಗ್ ಕಾಲ್‌ನಿಂದ ಆರಂಭವಾದ ಪ್ರೇಮಕಥೆ; ಗಂಡನ ಹತ್ಯೆಗೆ ಸಂಚು! ಪಂಚಾಯಿತಿಯಲ್ಲಿ ಬಯಲಾಯ್ತು ಕಿಲಾಡಿ ಪತ್ನಿಯ ಪ್ಲಾನ್

ಒಂದೇ ಒಂದು ರಾಂಗ್ ಕಾಲ್ ಹತ್ತು ವರ್ಷಗಳ ಸುಖಿ ದಾಂಪತ್ಯವನ್ನು ಛಿದ್ರಗೊಳಿಸಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಕ್ಷೇತ್ರದಲ್ಲಿ ಬೆಳಕಿಗೆ ಬಂದಿದೆ. ರಾಂಗ್ ಕಾಲ್ ಮೂಲಕ ಪರಿಚಯವಾದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬಳು, ತನ್ನ ಪತಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾಳೆ ಎಂಬ ಆರೋಪ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಚಿತ್ತೂರು ಜಿಲ್ಲೆಯ ಚಿರಂಜೀವಿ ಮತ್ತು ಶೋಭಾ ದಂಪತಿಗೆ ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಸುಖವಾಗಿ ಸಾಗುತ್ತಿದ್ದ ಕುಟುಂಬ ಜೀವನಕ್ಕೆ ಸುಮಾರು ಮೂರು ತಿಂಗಳ ಹಿಂದೆ ಬಂದಿದ್ದ ಒಂದು ರಾಂಗ್ ಕಾಲ್ ತಿರುವು ನೀಡಿದೆ. ಗುಂಟೂರು ಜಿಲ್ಲೆಯ ಬಾಲಾಜಿ ನಾಯಕ್ ಎಂಬಾತನೊಂದಿಗೆ ಪರಿಚಯ ಬೆಳೆದು, ಅದು ಬಳಿಕ ಪ್ರೇಮ ಸಂಬಂಧಕ್ಕೆ ತಿರುಗಿದೆ ಎನ್ನಲಾಗಿದೆ. ಬಳಿಕ ಶೋಭಾ, ಗಂಡ ಹಾಗೂ ಮಕ್ಕಳನ್ನು ತೊರೆದು ಬಾಲಾಜಿ ನಾಯಕ್ ಜೊತೆಗೆ ತೆರಳಿದ್ದಳು. ಈ ಸಂಬಂಧ ಚಿರಂಜೀವಿ ಗುಡುಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ನಡುವೆ, ಪತಿಯೇ ತಮ್ಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಭಾವಿಸಿದ ಶೋಭಾ, ಆತನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಇತ್ತೀಚೆಗೆ ನಡೆದಿದ್ದ ಮತ್ತೊಂದು ಹತ್ಯೆ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಚಿರಂಜೀವಿ ಎಚ್ಚರಿಕೆಯಿಂದ ನಡೆದುಕೊಂಡಿದ್ದು, ತನ್ನ ಪ್ರಾಣಕ್ಕೆ ಅಪಾಯವಿದೆ ಎಂಬ ಅನುಮಾನದಿಂದಲೇ ಸುರಕ್ಷತೆಯೊಂದಿಗೆ ಪತ್ನಿಯ ಪತ್ತೆಗೆ ಮುಂದಾಗಿದ್ದರು.

ಕೊನೆಗೆ ಶೋಭಾ ಮತ್ತು ಬಾಲಾಜಿ ನಾಯಕ್ ಇಬ್ಬರೂ ಬೆಂಗಿಲಪಲ್ಲಿಯಲ್ಲಿ ವಾಸಿಸುತ್ತಿದ್ದು, ದೇವಸ್ಥಾನದಲ್ಲಿ ವಿವಾಹವಾಗಿರುವ ಮಾಹಿತಿ ಚಿರಂಜೀವಿಗೆ ಲಭಿಸಿದೆ. ತಕ್ಷಣವೇ ಬಂಧುಗಳು ಹಾಗೂ ಗ್ರಾಮಸ್ಥರ ನೆರವಿನಿಂದ ಇಬ್ಬರನ್ನೂ ಗ್ರಾಮ ಪಂಚಾಯಿತಿ ಮುಂದೆ ಕರೆತರಲಾಗಿದ್ದು, ಪೊಲೀಸರಿಗೂ ಮಾಹಿತಿ ನೀಡಲಾಗಿದೆ.

ಪಂಚಾಯಿತಿಯ ವೇಳೆ ನಡೆದ ಚರ್ಚೆಯಲ್ಲಿ ಬಾಲಾಜಿ ನಾಯಕ್, “ಚಿರಂಜೀವಿಯನ್ನು ಹತ್ಯೆ ಮಾಡುವ ಯೋಜನೆ ಶೋಭಾಳದ್ದೇ” ಎಂದು ಹೇಳಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಹೇಳಿಕೆ ಗ್ರಾಮಸ್ಥರನ್ನು ಬೆಚ್ಚಿಬೀಳುವಂತೆ ಮಾಡಿದೆ.

ಪ್ರಕರಣ ಸಂಬಂಧ ಕುಪ್ಪಂ ಡಿಎಸ್ಪಿ ಪಾರ್ಥಸಾರಥಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಆರಂಭದಲ್ಲಿ ದೂರುಗೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಹಾಗೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂಬ ಆರೋಪದ ಹಿನ್ನೆಲೆ ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕವೇ ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ.

ಭ್ರಷ್ಟರ ಬೇಟೆ

Recent Posts

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

23 hours ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

23 hours ago

₹5 ಲಕ್ಷ ಸಾಲ ವಾಪಸ್ ಕೇಳಿದ್ದಕ್ಕೆ ರೇಪ್ ಕೇಸ್ ಬೆದರಿಕೆ? ಮಾನಸಿಕ ಕಿರುಕುಳಕ್ಕೆ ನೊಂದು ಯುವಕ ಆತ್ಮಹತ್ಯೆ; ಕುಟುಂಬದ ಗಂಭೀರ ಆರೋಪ

ಮಂಡ್ಯ: ಸಾಲವಾಗಿ ನೀಡಿದ್ದ ಹಣವನ್ನು ಮರಳಿ ಕೇಳಿದ್ದಕ್ಕೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ವಿವಾಹಿತೆಯ ಮಾನಸಿಕ ಕಿರುಕುಳದಿಂದ…

23 hours ago

ಹುಟ್ಟುಹಬ್ಬದ ಸಂಭ್ರಮ ದುರಂತದಲ್ಲಿ ಅಂತ್ಯ: ನೆಲಮಂಗಲದಲ್ಲಿ ಕಾರು ಪಲ್ಟಿ, ಇಬ್ಬರು ಸಾವು..!

ಬೆಂಗಳೂರು ಗ್ರಾಮಾಂತರ: ಹುಟ್ಟುಹಬ್ಬದ ಸಂಭ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸ್ನೇಹಿತರ ತಂಡ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು, ಇಬ್ಬರು…

23 hours ago

ರೋಡ್ ರೇಜ್ ವಿವಾದದ ಬಳಿಕ ಮಾಲೂರು ನ್ಯಾಯಾಧೀಶೆ ಗಾಯತ್ರಿಗೆ ಬೀದರ್ ವರ್ಗಾವಣೆ; ಹೈಕೋರ್ಟ್ ಆಡಳಿತಾತ್ಮಕ ಕ್ರಮ

ಬೆಂಗಳೂರು: ಸಾರ್ವಜನಿಕರೊಂದಿಗೆ ರಸ್ತೆ ಮಧ್ಯೆ ಮಾತಿನ ಚಕಮಕಿ ನಡೆಸಿ ಅಧಿಕಾರ ದುರ್ಬಳಕೆ ಆರೋಪಕ್ಕೆ ಗುರಿಯಾಗಿದ್ದ ಹಾಗೂ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ…

23 hours ago

ರಾಪಿಡೋ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿಯ ಬದುಕೇ ಚಿಂದಿ: 20 ಲಕ್ಷ ಚಿಕಿತ್ಸಾ ವೆಚ್ಚ, ನ್ಯಾಯಕ್ಕಾಗಿ ಕಣ್ಣೀರಿನ ಹೋರಾಟ!

ಬೆಂಗಳೂರು: ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಮೂಡುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಪಿಡೋ ಬೈಕ್…

23 hours ago