ಪ್ರೀತಿಸಿದ ಹುಡುಗಿಯನ್ನ ಪ್ರಿಯಕರನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಾಲಿನಿ ಎಂಬಾಕೆಯೇ ಕೊಲೆಯಾದ ಯುವತಿ, ಶಾಲಿನಿ ಮತ್ತು ಆಕೆಯ ಪ್ರಿಯಕರ ಆರೋಪಿ ಮನೋಜ್ ಇಬ್ಬರು ಪ್ರೀತಿ ಮಾಡುತ್ತಿದ್ದರು. ಆದರೆ ಶಾಲಿನಿಗೆ ಬೇರೆ ಮದುವೆ ಫಿಕ್ಸ್ ಮಾಡಲಾಗಿತ್ತು. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಕೂಡ ಆಗಿತ್ತು. ಮಾರ್ಚ್.14 ಸಂಜೆ ಶಾಲಿನಿ ನಿವಾಸಕ್ಕೆ ಬಂದಿದ್ದ ಮನೋಜ್. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಇಬ್ಬರು ಭೇಟಿಯಾಗಿದ್ದಾರೆ. ಈ ವೇಳೆ ಮನೋಜ್ ‘ನೀನು ಒಪ್ಪಿಕೊಂಡಿದ್ದಿಯಾ ಮನೆಯವರು ತೋರಿಸಿದ ಹುಡುಗನನ್ನ ಎಂದು ಗಲಾಟೆ ಮಾಡಿದ್ದನಂತೆ. ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ನಂತರ ಅಲ್ಲಿಂದ ಕೆ.ಪಿ ಅಗ್ರಹಾರದ ಮನೆಗೆ ಹೋಗಿದ್ದ ಮನೋಜ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಮನೋಜ್ನನ್ನು ಕುಟುಂಬದವರು ಅಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಶಾಲಿನಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಆಕೆಯ ಕುಟುಂಬದವರು ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಇನ್ನು ರಾತ್ರಿಯೇ ಮೃತ ಶಾಲಿನಿಯನ್ನ ಅಸ್ಪತ್ರೆಗೆ ದಾಖಲು ಮಾಡಿಸಿದ್ದ ಕುಟುಂಬ, ಈ ವೇಳೆ ಯುವತಿಯ ಗುಪ್ತಾಂಗದಲ್ಲಿ ರಕ್ತಸ್ರಾವ ಹಾಗೂ ಗಾಯದ ಗುರುತು ಪತ್ತೆಯಾಗಿದೆ. ಸದ್ಯ ವೈದ್ಯಕೀಯ ಪರೀಕ್ಷೆ ವೇಳೆ ಬಲವಂತದ ಲೈಂಗಿಕ ಕ್ರಿಯೆ ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…