Categories: CrimeLatest

ವೈದ್ಯಕೀಯ ಕ್ಷೇತ್ರದಲ್ಲಿ ಮಹಾ ವಂಚನೆ: ಆಪರೇಷನ್ ಥಿಯೇಟರ್‌ನಲ್ಲೇ ಯುವತಿಯ ಖಾಸಗಿ ಫೋಟೋ ಲೀಕ್!

ಉತ್ತರ ಪ್ರದೇಶದ ಕೌಶಂಬಿಯ ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ರೋಗಿಯ ಖಾಸಗಿತನ ಉಲ್ಲಂಘನೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಶಸ್ತ್ರಚಿಕಿತ್ಸೆ ವೇಳೆ ಯುವತಿಯೊಬ್ಬರ ಮುಖ ಹಾಗೂ ಖಾಸಗಿ ಭಾಗಗಳ ಫೋಟೋಗಳನ್ನು ತೆಗೆದು ವಾಟ್ಸಾಪ್ ಗುಂಪುಗಳಲ್ಲಿ ಹಂಚಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣದ ಮೇಲೆ ತೀವ್ರ ತನಿಖೆ ನಡೆಯುತ್ತಿದೆ.

ಏಪ್ರಿಲ್ 26ರಂದು 22 ವರ್ಷದ ಯುವತಿ ಬಾರ್ಥೋಲಿನ್ ಸಿಸ್ಟ್ ಶಸ್ತ್ರಚಿಕಿತ್ಸೆಗೆ ಸ್ತ್ರೀರೋಗ ವಿಭಾಗದಲ್ಲಿ ದಾಖಲಾಗಿದ್ದರು. ಹಿರಿಯ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದ ಸಂದರ್ಭದಲ್ಲಿ, ಆಸ್ಪತ್ರೆ ಸಿಬ್ಬಂದಿಯೊಬ್ಬರು ಮೊಬೈಲ್‌ನಲ್ಲಿ ಆಕೆಯ ಅರೆನಗ್ನ ಫೋಟೋಗಳನ್ನು ಸೆರೆಹಿಡಿದಿರುವ ಆರೋಪವಿದೆ.

ಈ ಫೋಟೋಗಳನ್ನು ವೈದ್ಯರು, ಅಧಿಕಾರಿಗಳು ಹಾಗೂ ಮಾಧ್ಯಮದವರಿರುವ ವಾಟ್ಸಾಪ್ ಗುಂಪುಗಳಿಗೆ ಕಳುಹಿಸಲಾಗಿದ್ದು, ಬಳಿಕ ಅವು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದವು. ಇದರಿಂದ ಪ್ರಕರಣವು ಹೆಚ್ಚು ಗಂಭೀರ ಸ್ವರೂಪ ಪಡೆದಿದೆ.

ಈ ಕುರಿತು ರಾಜ್ಯ ಮಹಿಳಾ ಆಯೋಗದ ಸದಸ್ಯೆ ಪ್ರತಿಭಾ ಕುಶ್ವಾಹ ದೂರು ನೀಡಿದ ಬೆನ್ನಲ್ಲೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತ್ಯನಾರಾಯಣ ಪ್ರಜಾಪತ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದ್ದಾರೆ. ಡಿಎಸ್‌ಪಿ ಶಿವಾಂಕ್ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಹರಿಓಂ ಕುಮಾರ್ ಸಿಂಗ್ ಈ ಘಟನೆ ದೊಡ್ಡ ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಆಪರೇಷನ್ ಥಿಯೇಟರ್ ಒಳಗೆ ಮೊಬೈಲ್ ಕೊಂಡೊಯ್ದವರು ಯಾರು ಎಂಬುದನ್ನು ಪತ್ತೆಹಚ್ಚಲು ಮೂವರು ಸದಸ್ಯರ ಸಮಿತಿ ರಚಿಸಿ ತನಿಖೆ ನಡೆಸಲಾಗುತ್ತಿದೆ. ವೈದ್ಯಕೀಯ ನೈತಿಕತೆ ಮತ್ತು ರೋಗಿಯ ಗೌಪ್ಯತೆಯನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.

ಈ ಘಟನೆಯು ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳ ಖಾಸಗಿತನದ ರಕ್ಷಣೆ ಮತ್ತು ಡಿಜಿಟಲ್ ಸಾಧನಗಳ ದುರ್ಬಳಕೆ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ. ತಪ್ಪಿತಸ್ಥರಿಗೆ ಕಟ್ಟುನಿಟ್ಟಿನ ಶಿಕ್ಷೆ ವಿಧಿಸಬೇಕೆಂದು ಪೋಷಕರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

14 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

14 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

14 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

14 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

14 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

14 hours ago