Latest

ಮೇಕಪ್ ಮಾಡಿದ ಅವಾಂತರ; ಮದುವೆಗೆ ಸಿದ್ಧವಾಗಿದ್ದ ಮಹಿಳೆ ಮುಖವಾಯಿತು ವಿಕಾರ!

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಯುವತಿ ಒಬ್ಬರಿಗೆ ಮಾರ್ಚ್ 2ನೇ ತಾರೀಕು ಮದುವೆ ನಿಶ್ಚಯವಾಗಿರುತ್ತದೆ ಇದೇ ಕಾರಣದಿಂದಾಗಿ ಸುಂದರವಾಗಿ ಕಾಣಿಸಿಕೊಳ್ಳಲು ಯುವತಿ 10 ದಿನ ಮೊದಲೇ ಬ್ಯೂಟಿ ಪಾರ್ಲರ್ಗೆ ಹೋಗಿ ಫೇಶಿಯಲ್ ಮಾಡಿಸಿಕೊಂಡಿರುತ್ತಾರೆ. ಇದನ್ನು ಮಾಡಿಸಿಕೊಂಡ ಮರುದಿನವೇ ಅವರಿಗೆ ಅಚ್ಚರಿಯೊಂದು ಕಾದಿರುತ್ತದೆ. ಅದೇನೆಂದರೆ, ಸುಂದರವಾಗಬೇಕಿದ್ದ ಮುಖ ವಿಕಾರವಾಗಿರುತ್ತದೆ.

ಫೇಶಿಯಲ್ ಮಾಡಿಸಿಕೊಂಡ ಕಾರಣ ಮುಖವೆಲ್ಲ ಸುಟ್ಟಂತಾಗಿ ಕಪ್ಪಾಗುವುದಲ್ಲದೆ ಊದಿಕೊಂಡಿರುತ್ತದೆ. ಈ ವಿಚಾರವನ್ನು ತಿಳಿದ ಗಂಡಿನ ಕಡೆಯವರು ಮದುವೆಯನ್ನು ಕ್ಯಾನ್ಸಲ್ ಮಾಡಲು ಮುಂದಾಗುತ್ತಾರೆ ನಂತರ ಯುವತಿಯು ಬ್ಯೂಟಿ ಪಾರ್ಲರ್ ಅವರ ವಿರುದ್ಧ ದೂರನ್ನು ದಾಖಲಿಸಿದ್ದು ಮಾತುಕತೆಯಲ್ಲಿ ರಜೆ ಮಾಡಿಕೊಂಡಿರುತ್ತಾರೆ. ಮಹಿಳೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಕೆಮಿಕಲ್ ರಿಯಾಕ್ಷನ್ ನಿಂದ ಈ ರೀತಿ ಆಗಿರುವುದು ಮೇಕಪ್ ಮಾಡುವ ಮೊದಲು ಅವರ ಚರ್ಮದ ಬಗ್ಗೆ ತಿಳಿಯಬೇಕು ಹಾಗೂ ಅವರು ಯಾವ ಕ್ರೀಮ್ಗಳನ್ನು ಬಳಸುತ್ತಿದ್ದಾರೆ ಎಂದು ಅರಿತು ಮೇಕಪ್ ಮಾಡಬೇಕು ಇಲ್ಲವಾದಲ್ಲಿ ಇಂತಹ ಸಮಸ್ಯೆಗಳು ಆಗುತ್ತವೆ ಎಂದು ತಿಳಿಸಿರುತ್ತಾರೆ. ಹಾಗೂ ಚಿಕಿತ್ಸೆ ನೀಡಿದ ಕೆಲವು ದಿನಗಳ ಬಳಿಕ ಮಹಿಳೆಯ ಮುಖ ಮೊದಲಿನಂತೆ ಆಗುವುದು ಎಂದು ವೈದ್ಯರು ಹೇಳಿರುತ್ತಾರೆ.
ಗಂಡಿನ ಕಡೆಯವರು ಯುವತಿಯ ಸಂಬಂಧಿಕರಾಗಿದ್ದ ಕಾರಣ ಈ ವಿಚಾರವನ್ನು ತಿಳಿದ ಮೇಲೆ ಮದುವೆಯನ್ನು ಸ್ವಲ್ಪ ದಿನದ ಮಟ್ಟಿಗೆ ಮುಂದೂಡಿ ನಂತರ ಮಾಡೋಣ ಎಂದು ಒಪ್ಪಿಕೊಂಡಿರುತ್ತಾರೆ.

ಒಟ್ಟಿನಲ್ಲಿ ಮಹಿಳೆಗೆ ಮೇಕಪ್ ಮಾಡಿದ ಅವಾಂತರದ ವಿಚಾರವೀಗ ವೈದ್ಯರು ನೀಡಿದ ಭರವಸೆಯ ಮೇಲೆ ಹಾಗೂ ಗಂಡಿನವರು ಪುನಹ ಮದುವೆಗೆ ಒಪ್ಪಿರುವ ಕಾರಣ ಈ ಪ್ರಕರಣವು ಸುಖಾಂತ್ಯ ಕಂಡಿದೆ ಎಂದು ಹೇಳಬಹುದು.

ಭ್ರಷ್ಟರ ಬೇಟೆ

Recent Posts

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

6 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

21 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

23 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago