ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಯುವತಿ ಒಬ್ಬರಿಗೆ ಮಾರ್ಚ್ 2ನೇ ತಾರೀಕು ಮದುವೆ ನಿಶ್ಚಯವಾಗಿರುತ್ತದೆ ಇದೇ ಕಾರಣದಿಂದಾಗಿ ಸುಂದರವಾಗಿ ಕಾಣಿಸಿಕೊಳ್ಳಲು ಯುವತಿ 10 ದಿನ ಮೊದಲೇ ಬ್ಯೂಟಿ ಪಾರ್ಲರ್ಗೆ ಹೋಗಿ ಫೇಶಿಯಲ್ ಮಾಡಿಸಿಕೊಂಡಿರುತ್ತಾರೆ. ಇದನ್ನು ಮಾಡಿಸಿಕೊಂಡ ಮರುದಿನವೇ ಅವರಿಗೆ ಅಚ್ಚರಿಯೊಂದು ಕಾದಿರುತ್ತದೆ. ಅದೇನೆಂದರೆ, ಸುಂದರವಾಗಬೇಕಿದ್ದ ಮುಖ ವಿಕಾರವಾಗಿರುತ್ತದೆ.
ಫೇಶಿಯಲ್ ಮಾಡಿಸಿಕೊಂಡ ಕಾರಣ ಮುಖವೆಲ್ಲ ಸುಟ್ಟಂತಾಗಿ ಕಪ್ಪಾಗುವುದಲ್ಲದೆ ಊದಿಕೊಂಡಿರುತ್ತದೆ. ಈ ವಿಚಾರವನ್ನು ತಿಳಿದ ಗಂಡಿನ ಕಡೆಯವರು ಮದುವೆಯನ್ನು ಕ್ಯಾನ್ಸಲ್ ಮಾಡಲು ಮುಂದಾಗುತ್ತಾರೆ ನಂತರ ಯುವತಿಯು ಬ್ಯೂಟಿ ಪಾರ್ಲರ್ ಅವರ ವಿರುದ್ಧ ದೂರನ್ನು ದಾಖಲಿಸಿದ್ದು ಮಾತುಕತೆಯಲ್ಲಿ ರಜೆ ಮಾಡಿಕೊಂಡಿರುತ್ತಾರೆ. ಮಹಿಳೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಕೆಮಿಕಲ್ ರಿಯಾಕ್ಷನ್ ನಿಂದ ಈ ರೀತಿ ಆಗಿರುವುದು ಮೇಕಪ್ ಮಾಡುವ ಮೊದಲು ಅವರ ಚರ್ಮದ ಬಗ್ಗೆ ತಿಳಿಯಬೇಕು ಹಾಗೂ ಅವರು ಯಾವ ಕ್ರೀಮ್ಗಳನ್ನು ಬಳಸುತ್ತಿದ್ದಾರೆ ಎಂದು ಅರಿತು ಮೇಕಪ್ ಮಾಡಬೇಕು ಇಲ್ಲವಾದಲ್ಲಿ ಇಂತಹ ಸಮಸ್ಯೆಗಳು ಆಗುತ್ತವೆ ಎಂದು ತಿಳಿಸಿರುತ್ತಾರೆ. ಹಾಗೂ ಚಿಕಿತ್ಸೆ ನೀಡಿದ ಕೆಲವು ದಿನಗಳ ಬಳಿಕ ಮಹಿಳೆಯ ಮುಖ ಮೊದಲಿನಂತೆ ಆಗುವುದು ಎಂದು ವೈದ್ಯರು ಹೇಳಿರುತ್ತಾರೆ.
ಗಂಡಿನ ಕಡೆಯವರು ಯುವತಿಯ ಸಂಬಂಧಿಕರಾಗಿದ್ದ ಕಾರಣ ಈ ವಿಚಾರವನ್ನು ತಿಳಿದ ಮೇಲೆ ಮದುವೆಯನ್ನು ಸ್ವಲ್ಪ ದಿನದ ಮಟ್ಟಿಗೆ ಮುಂದೂಡಿ ನಂತರ ಮಾಡೋಣ ಎಂದು ಒಪ್ಪಿಕೊಂಡಿರುತ್ತಾರೆ.
ಒಟ್ಟಿನಲ್ಲಿ ಮಹಿಳೆಗೆ ಮೇಕಪ್ ಮಾಡಿದ ಅವಾಂತರದ ವಿಚಾರವೀಗ ವೈದ್ಯರು ನೀಡಿದ ಭರವಸೆಯ ಮೇಲೆ ಹಾಗೂ ಗಂಡಿನವರು ಪುನಹ ಮದುವೆಗೆ ಒಪ್ಪಿರುವ ಕಾರಣ ಈ ಪ್ರಕರಣವು ಸುಖಾಂತ್ಯ ಕಂಡಿದೆ ಎಂದು ಹೇಳಬಹುದು.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…