ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಯುವತಿ ಒಬ್ಬರಿಗೆ ಮಾರ್ಚ್ 2ನೇ ತಾರೀಕು ಮದುವೆ ನಿಶ್ಚಯವಾಗಿರುತ್ತದೆ ಇದೇ ಕಾರಣದಿಂದಾಗಿ ಸುಂದರವಾಗಿ ಕಾಣಿಸಿಕೊಳ್ಳಲು ಯುವತಿ 10 ದಿನ ಮೊದಲೇ ಬ್ಯೂಟಿ ಪಾರ್ಲರ್ಗೆ ಹೋಗಿ ಫೇಶಿಯಲ್ ಮಾಡಿಸಿಕೊಂಡಿರುತ್ತಾರೆ. ಇದನ್ನು ಮಾಡಿಸಿಕೊಂಡ ಮರುದಿನವೇ ಅವರಿಗೆ ಅಚ್ಚರಿಯೊಂದು ಕಾದಿರುತ್ತದೆ. ಅದೇನೆಂದರೆ, ಸುಂದರವಾಗಬೇಕಿದ್ದ ಮುಖ ವಿಕಾರವಾಗಿರುತ್ತದೆ.
ಫೇಶಿಯಲ್ ಮಾಡಿಸಿಕೊಂಡ ಕಾರಣ ಮುಖವೆಲ್ಲ ಸುಟ್ಟಂತಾಗಿ ಕಪ್ಪಾಗುವುದಲ್ಲದೆ ಊದಿಕೊಂಡಿರುತ್ತದೆ. ಈ ವಿಚಾರವನ್ನು ತಿಳಿದ ಗಂಡಿನ ಕಡೆಯವರು ಮದುವೆಯನ್ನು ಕ್ಯಾನ್ಸಲ್ ಮಾಡಲು ಮುಂದಾಗುತ್ತಾರೆ ನಂತರ ಯುವತಿಯು ಬ್ಯೂಟಿ ಪಾರ್ಲರ್ ಅವರ ವಿರುದ್ಧ ದೂರನ್ನು ದಾಖಲಿಸಿದ್ದು ಮಾತುಕತೆಯಲ್ಲಿ ರಜೆ ಮಾಡಿಕೊಂಡಿರುತ್ತಾರೆ. ಮಹಿಳೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಕೆಮಿಕಲ್ ರಿಯಾಕ್ಷನ್ ನಿಂದ ಈ ರೀತಿ ಆಗಿರುವುದು ಮೇಕಪ್ ಮಾಡುವ ಮೊದಲು ಅವರ ಚರ್ಮದ ಬಗ್ಗೆ ತಿಳಿಯಬೇಕು ಹಾಗೂ ಅವರು ಯಾವ ಕ್ರೀಮ್ಗಳನ್ನು ಬಳಸುತ್ತಿದ್ದಾರೆ ಎಂದು ಅರಿತು ಮೇಕಪ್ ಮಾಡಬೇಕು ಇಲ್ಲವಾದಲ್ಲಿ ಇಂತಹ ಸಮಸ್ಯೆಗಳು ಆಗುತ್ತವೆ ಎಂದು ತಿಳಿಸಿರುತ್ತಾರೆ. ಹಾಗೂ ಚಿಕಿತ್ಸೆ ನೀಡಿದ ಕೆಲವು ದಿನಗಳ ಬಳಿಕ ಮಹಿಳೆಯ ಮುಖ ಮೊದಲಿನಂತೆ ಆಗುವುದು ಎಂದು ವೈದ್ಯರು ಹೇಳಿರುತ್ತಾರೆ.
ಗಂಡಿನ ಕಡೆಯವರು ಯುವತಿಯ ಸಂಬಂಧಿಕರಾಗಿದ್ದ ಕಾರಣ ಈ ವಿಚಾರವನ್ನು ತಿಳಿದ ಮೇಲೆ ಮದುವೆಯನ್ನು ಸ್ವಲ್ಪ ದಿನದ ಮಟ್ಟಿಗೆ ಮುಂದೂಡಿ ನಂತರ ಮಾಡೋಣ ಎಂದು ಒಪ್ಪಿಕೊಂಡಿರುತ್ತಾರೆ.
ಒಟ್ಟಿನಲ್ಲಿ ಮಹಿಳೆಗೆ ಮೇಕಪ್ ಮಾಡಿದ ಅವಾಂತರದ ವಿಚಾರವೀಗ ವೈದ್ಯರು ನೀಡಿದ ಭರವಸೆಯ ಮೇಲೆ ಹಾಗೂ ಗಂಡಿನವರು ಪುನಹ ಮದುವೆಗೆ ಒಪ್ಪಿರುವ ಕಾರಣ ಈ ಪ್ರಕರಣವು ಸುಖಾಂತ್ಯ ಕಂಡಿದೆ ಎಂದು ಹೇಳಬಹುದು.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…