ಮಂಡ್ಯ: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ‘ದಿಶಾ’ ಸಭೆಯಲ್ಲಿ ಅಚ್ಚರಿಯ ಘಟನೆ ನಡೆದಿದೆ. ಕೇಂದ್ರ ಸಚಿವ H. D. Kumaraswamy ಅವರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಹಾಗೂ ಜೆಡಿಎಸ್ ಮಾಜಿ ಶಾಸಕರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ ಮಾಡಿ ನ್ಯಾಯಕ್ಕಾಗಿ ಕಣ್ಣೀರಿಟ್ಟ ಘಟನೆ ಗಮನ ಸೆಳೆದಿದೆ.
ಮಳವಳ್ಳಿ ತಾಲ್ಲೂಕಿನ ಪ್ರಸನ್ನ ಕುಮಾರ್ ಎಂಬುವವರು ಈ ಆರೋಪ ಮಾಡಿದ್ದಾರೆ. ಮಳವಳ್ಳಿಯ ಮಾಜಿ ಶಾಸಕ ಡಾ. ಕೆ. ಅನ್ನದಾನಿ ತಮ್ಮ ಪತ್ನಿ ವಿಜಯಲಕ್ಷ್ಮಿ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅವರು ಸಚಿವರ ಮುಂದೆ ದೂರು ನೀಡಿದ್ದಾರೆ. ಸಭೆ ಮುಗಿಸಿ ಹೊರಬಂದ ಸಚಿವ ಕುಮಾರಸ್ವಾಮಿ ಅವರ ಕಾಲಿಗೆ ಬಿದ್ದ ಪ್ರಸನ್ನ, “ನನಗೆ ನ್ಯಾಯ ಕೊಡಿಸಿ” ಎಂದು ಬೇಡಿಕೊಂಡಿದ್ದಾರೆ.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಸನ್ನ ಕುಮಾರ್, “ನನ್ನ ಪತ್ನಿಗಾಗಿ ಅನ್ನದಾನಿ ಅವರು ಮೈಸೂರಿನಲ್ಲಿ ಸುಮಾರು ಒಂದೂವರೆ ಕೋಟಿ ರೂ. ಮೌಲ್ಯದ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ. ಪ್ರತಿದಿನ ರಾತ್ರಿ ಅವರು ಅಲ್ಲಿಗೆ ತೆರಳುತ್ತಾರೆ” ಎಂದು ಆರೋಪಿಸಿದರು.
ಇದಲ್ಲದೆ, “ಪತ್ನಿ ಮತ್ತು ಮಾಜಿ ಶಾಸಕ ದಿನವೂ ಗಂಟೆಗಳ ಕಾಲ ಫೋನ್ನಲ್ಲಿ ಮಾತನಾಡುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ನನಗೆ ಬೆದರಿಕೆ ಹಾಕಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪತ್ನಿಯೊಂದಿಗೆ ಬದುಕಲು ಸಾಧ್ಯವಿಲ್ಲ. ವಿಚ್ಛೇದನ ಕೇಳಿದರೆ 30 ಲಕ್ಷ ರೂ. ಕೊಡಬೇಕು ಎಂದು ಷರತ್ತು ಹಾಕಿದ್ದಾಳೆ” ಎಂದು ತಮ್ಮ ನೋವನ್ನು ಹೊರಹಾಕಿದರು.
ಪ್ರಸನ್ನ ಕುಮಾರ್ ಅವರ ಅಳಲನ್ನು ಆಲಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ, “ಈ ಕ್ಷಣದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಸಭೆಯ ನಂತರ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತೇನೆ” ಎಂದು ಭರವಸೆ ನೀಡಿದರು.
ಸ್ವಪಕ್ಷದ ಮಾಜಿ ಶಾಸಕರ ವಿರುದ್ಧವೇ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಸೆಳೆಯುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…