Crime

ಆಹಾರ ನೀಡುವ ನೆಪದಲ್ಲಿ ಬೀದಿ ನಾಯಿಗೆ ಅತ್ಯಾಚಾರ ಮಾಡಿದ ಕಾಮುಕ!

ಲಕ್ನೋ, ಆಗಸ್ಟ್ 10 — ಮಾನವೀಯತೆ ಮರೆತು ಪ್ರಾಣಿಗಳ ಮೇಲೆಯೂ ಹೀನಕೃತ್ಯ ಎಸಗುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಬೆಳಕಿಗೆ ಬಂದಿದೆ. ಗೋಮತಿ ನಗರದ ಪತ್ರಕರ್ಪುರಂ ಪ್ರದೇಶದಲ್ಲಿ 24 ವರ್ಷದ ಯುವಕ ಬೀದಿ ನಾಯಿಯೊಂದಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ.

ಮಾಹಿತಿಯ ಪ್ರಕಾರ, ಆರೋಪಿಯಾದ ಸೋನು ವಿಶ್ವಕರ್ಮ ಎನ್ನುವವನು ನಾಯಿಗೆ ಆಹಾರ ನೀಡುವ ನೆಪದಲ್ಲಿ ಅದನ್ನು ಹತ್ತಿರಕ್ಕೆ ಕರೆದು, ವಿಶ್ವಾಸಕ್ಕೆ ದ್ರೋಹ ಮಾಡಿ ಹೀನ ಕೃತ್ಯಕ್ಕೆ ಕೈಹಾಕಿದ್ದಾನೆ. ಈ ಘಟನೆ ಆಗಸ್ಟ್ 7ರಂದು ನಡೆದಿದ್ದು, ಸ್ಥಳೀಯರು ಅದನ್ನು ಗುಪ್ತವಾಗಿ ವಿಡಿಯೋಗೆ ದಾಖಲಿಸಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಸಾರ್ವಜನಿಕ ಆಕ್ರೋಶ ಉಕ್ಕಿ ಹರಿಯಿತು.

‘ಆಸ್ರಾ ದಿ ಹೆಲ್ಪಿಂಗ್ ಹ್ಯಾಂಡ್ಸ್’ ಎಂಬ ಎನ್‌ಜಿಒ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಿದ್ದು, ಆರೋಪಿಯನ್ನು ಬಂಧಿಸುವಂತೆ ಒತ್ತಾಯ ಮಾಡಿತು. ವಿಡಿಯೋ ವೈರಲ್ ಆದ ಬಳಿಕ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿ, ಪಾಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

ಮಾಹಿತಿ ತಿಳಿದ ಕೂಡಲೇ ಆರೋಪಿಯಾದ ಸೋನು ವಿಶ್ವಕರ್ಮ ಸ್ಥಳದಿಂದ ಪರಾರಿಯಾಗಿದ್ದರೂ, ಪೊಲೀಸರು ಚುರುಕಾಗಿ ಕಾರ್ಯಚರಣೆ ನಡೆಸಿ ಅವನನ್ನು ವಿನಾಯಕ ಖಂಡ್ ಪ್ರದೇಶದಲ್ಲಿ ಬಂಧಿಸಿದರು. ತನಿಖೆಯಲ್ಲಿ ಅವನು ಹಲವು ದಿನಗಳಿಂದ ಬೀದಿ ನಾಯಿಗಳ ಸುತ್ತಮುತ್ತ ಸಂಚರಿಸುತ್ತಿದ್ದಾನೆಂಬ ಸಂಗತಿ ಬಹಿರಂಗವಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗೆ ಪ್ರಾಣಿ ಕ್ರೂರತೆ ಹಾಗೂ ಲೈಂಗಿಕ ಅಪರಾಧಗಳ ಸಂಬಂಧಿತ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈ ಘಟನೆ ಪ್ರಾಣಿಗಳ ಸುರಕ್ಷತೆ ಹಾಗೂ ಕಾನೂನು ಜಾರಿಗೆ ಸಂಬಂಧಿಸಿದಂತೆ ಗಂಭೀರ ಚರ್ಚೆಗೆ ಕಾರಣವಾಗಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

9 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

9 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

9 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

9 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

24 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

24 hours ago