ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಒಂದು ಕೈನಲ್ಲಿ ಪಿಸ್ತೂಲು, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದು ಜನರನ್ನು ಭಯಭೀತಿಗೊಳಿಸಿದ್ದು, ಪೊಲೀಸರು ಹಾಗೂ ಜನ ಹಿಡಿಯಲು ಹೋದಾಗ ತನ್ನ ಕತ್ತು ಸೀಳಿಕೊಂಡಿದ್ದಾನೆ.
ಮಾರ್ಚ್ ಹದಿನಾರು ರಂದು ಸಂಜೆ ದೆಹಲಿಯ ನಾತು ಕಾಲೋನಿ ಚೌಕಿಯಲ್ಲಿ ಈ ಘಟನೆ ನಡೆದಿದ್ದು, ಕೃಷನ್ ಶೇರವಾಲ್ ಎಂಬಾತ ಕತ್ತಿ ಹಾಗೂ ಚಾಕು ಹಿಡಿದು ಅಡ್ಡಾಡಿದ್ದಾನೆ. ಇದರಿಂದ ಭಯಭೀತರಾದ ಜನ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಕೆಲವರು ಕೂಡಲೇ ಪೊಲೀಸರಿಗೂ ಸಹ ಈ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿಯೇ ಆರೋಪಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದ ಎನ್ನಲಾಗಿದ್ದು, ಪೊಲೀಸರು ಆತನನ್ನು ಸುತ್ತುವರೆದ ವೇಳೆ ಕತ್ತಿಯಿಂದ ತನ್ನ ಕತ್ತನ್ನು ಇರಿದುಕೊಂಡಿದ್ದಾನೆ.
ಇದರ ಪರಿಣಾಮವಾಗಿ ಆತ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾನೆ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…