ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಒಂದು ಕೈನಲ್ಲಿ ಪಿಸ್ತೂಲು, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದು ಜನರನ್ನು ಭಯಭೀತಿಗೊಳಿಸಿದ್ದು, ಪೊಲೀಸರು ಹಾಗೂ ಜನ ಹಿಡಿಯಲು ಹೋದಾಗ ತನ್ನ ಕತ್ತು ಸೀಳಿಕೊಂಡಿದ್ದಾನೆ.
ಮಾರ್ಚ್ ಹದಿನಾರು ರಂದು ಸಂಜೆ ದೆಹಲಿಯ ನಾತು ಕಾಲೋನಿ ಚೌಕಿಯಲ್ಲಿ ಈ ಘಟನೆ ನಡೆದಿದ್ದು, ಕೃಷನ್ ಶೇರವಾಲ್ ಎಂಬಾತ ಕತ್ತಿ ಹಾಗೂ ಚಾಕು ಹಿಡಿದು ಅಡ್ಡಾಡಿದ್ದಾನೆ. ಇದರಿಂದ ಭಯಭೀತರಾದ ಜನ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಕೆಲವರು ಕೂಡಲೇ ಪೊಲೀಸರಿಗೂ ಸಹ ಈ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿಯೇ ಆರೋಪಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದ ಎನ್ನಲಾಗಿದ್ದು, ಪೊಲೀಸರು ಆತನನ್ನು ಸುತ್ತುವರೆದ ವೇಳೆ ಕತ್ತಿಯಿಂದ ತನ್ನ ಕತ್ತನ್ನು ಇರಿದುಕೊಂಡಿದ್ದಾನೆ.
ಇದರ ಪರಿಣಾಮವಾಗಿ ಆತ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾನೆ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…