ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಒಂದು ಕೈನಲ್ಲಿ ಪಿಸ್ತೂಲು, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದು ಜನರನ್ನು ಭಯಭೀತಿಗೊಳಿಸಿದ್ದು, ಪೊಲೀಸರು ಹಾಗೂ ಜನ ಹಿಡಿಯಲು ಹೋದಾಗ ತನ್ನ ಕತ್ತು ಸೀಳಿಕೊಂಡಿದ್ದಾನೆ.
ಮಾರ್ಚ್ ಹದಿನಾರು ರಂದು ಸಂಜೆ ದೆಹಲಿಯ ನಾತು ಕಾಲೋನಿ ಚೌಕಿಯಲ್ಲಿ ಈ ಘಟನೆ ನಡೆದಿದ್ದು, ಕೃಷನ್ ಶೇರವಾಲ್ ಎಂಬಾತ ಕತ್ತಿ ಹಾಗೂ ಚಾಕು ಹಿಡಿದು ಅಡ್ಡಾಡಿದ್ದಾನೆ. ಇದರಿಂದ ಭಯಭೀತರಾದ ಜನ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಕೆಲವರು ಕೂಡಲೇ ಪೊಲೀಸರಿಗೂ ಸಹ ಈ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿಯೇ ಆರೋಪಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದ ಎನ್ನಲಾಗಿದ್ದು, ಪೊಲೀಸರು ಆತನನ್ನು ಸುತ್ತುವರೆದ ವೇಳೆ ಕತ್ತಿಯಿಂದ ತನ್ನ ಕತ್ತನ್ನು ಇರಿದುಕೊಂಡಿದ್ದಾನೆ.
ಇದರ ಪರಿಣಾಮವಾಗಿ ಆತ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾನೆ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…