ಪೋಲಿಸರಿಂದ ಕಾರಣ ವಿಲ್ಲದೆ ಯುವಕನ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ಪೋಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ತಾಲ್ಲೂಕಿನ ಕಾನಮಾಕನಹಳ್ಳಿ ಗ್ರಾಮದ ಶಿವಪ್ಪ ಯುವಕನ ಮೇಲೆ ತಡರಾತ್ರಿ ಠಾಣೆಗೆ ಕರೆದೊಯ್ದು ಲಾಠಿ ಹಾಗೂ ಬೂಟಿನಲ್ಲಿ ಹೊಡೆದಿದ್ದಾರೆ ಎಂದು ಶಿವಪ್ಪ ಆರೋಪಿಸಿದ್ದಾರೆ.
ಪೋಲೀಸರಿಂದ ತೀವ್ರ ಹಲ್ಲೆಗೊಳಗಾದ ಶಿವಪ್ಪ ಚಿಕಿತ್ಸೆಗಾಗಿ ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ..
ಕಳೆದ ಎರಡು ತಿಂಗಳ ಹಿಂದೆ ನಡೆದಿದ್ದ ಟ್ಯಾಕ್ಟರ್ ಅಫಘಾತ ಪ್ರಕರಣ ಸಂಬಂದ ಶಿವಪ್ಪ ಜಾಮೀನು ಸಹ ಪಡೆದುಕೊಂಡಿರುತ್ತಾರೆ. ಅಫಘಾತ ಪ್ರಕರಣ ಸಂಬಂದ ಕಳೆದ ತಡ ರಾತ್ರಿ ಠಾಣೆಗೆ ಕರೆದೊಯ್ದು ಶ್ರೀನಿವಾಸಪುರ ಪೋಲೀಸ್ ಠಾಣೆಯ ಪಿಎಸ್.ಐ ನಾರಾಯಣಸ್ವಾಮಿ ಹಾಗು ಠಾಣೆ ಎಸ್ಬಿ ರಾಮಚಂದ್ರಪ್ಪ ರಿಂದ ಹಲ್ಲೆಯಾಗಿದ್ದು, ಜಾಮೀನು ಪಡೆದಿದ್ದರು ಹಣಕ್ಕಾಗಿ ಹಲ್ಲೆ ನಡೆಸಿದ್ದಾರೆಂದು ಗಾಯಾಳು ಶಿವಪ್ಪ ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಾವು ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…