ಪೋಲಿಸರಿಂದ ಕಾರಣ ವಿಲ್ಲದೆ ಯುವಕನ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ಪೋಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ತಾಲ್ಲೂಕಿನ ಕಾನಮಾಕನಹಳ್ಳಿ ಗ್ರಾಮದ ಶಿವಪ್ಪ ಯುವಕನ ಮೇಲೆ ತಡರಾತ್ರಿ ಠಾಣೆಗೆ ಕರೆದೊಯ್ದು ಲಾಠಿ ಹಾಗೂ ಬೂಟಿನಲ್ಲಿ ಹೊಡೆದಿದ್ದಾರೆ ಎಂದು ಶಿವಪ್ಪ ಆರೋಪಿಸಿದ್ದಾರೆ.
ಪೋಲೀಸರಿಂದ ತೀವ್ರ ಹಲ್ಲೆಗೊಳಗಾದ ಶಿವಪ್ಪ ಚಿಕಿತ್ಸೆಗಾಗಿ ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ..
ಕಳೆದ ಎರಡು ತಿಂಗಳ ಹಿಂದೆ ನಡೆದಿದ್ದ ಟ್ಯಾಕ್ಟರ್ ಅಫಘಾತ ಪ್ರಕರಣ ಸಂಬಂದ ಶಿವಪ್ಪ ಜಾಮೀನು ಸಹ ಪಡೆದುಕೊಂಡಿರುತ್ತಾರೆ. ಅಫಘಾತ ಪ್ರಕರಣ ಸಂಬಂದ ಕಳೆದ ತಡ ರಾತ್ರಿ ಠಾಣೆಗೆ ಕರೆದೊಯ್ದು ಶ್ರೀನಿವಾಸಪುರ ಪೋಲೀಸ್ ಠಾಣೆಯ ಪಿಎಸ್.ಐ ನಾರಾಯಣಸ್ವಾಮಿ ಹಾಗು ಠಾಣೆ ಎಸ್ಬಿ ರಾಮಚಂದ್ರಪ್ಪ ರಿಂದ ಹಲ್ಲೆಯಾಗಿದ್ದು, ಜಾಮೀನು ಪಡೆದಿದ್ದರು ಹಣಕ್ಕಾಗಿ ಹಲ್ಲೆ ನಡೆಸಿದ್ದಾರೆಂದು ಗಾಯಾಳು ಶಿವಪ್ಪ ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಾವು ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…