Latest

ಅಪ್ರಾಪ್ತ ಸ್ನೇಹಿತೆ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ.

ವೈದ್ಯರೊಬ್ಬರ ಅಪ್ರಾಪ್ತ ಮಗಳ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಉತ್ತರಪ್ರದೇಶದ ಕಾನ್ಪುರದ ಬರ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಹುಕ್ಕಾ ಬಾರ್‌ನಲ್ಲಿ ನಡೆದಿದೆ.
ಇಲ್ಲಿನ ಬರ್ರಾ ನಿವಾಸಿಯಾಗಿರುವ ಇನ್‌ಸ್ಟಾಗ್ರಾಮ್ ಸ್ನೇಹಿತ ತನ್ನ ಮಗಳನ್ನು ಹುಕ್ಕಾ ಬಾರ್‌ಗೆ ಆಹ್ವಾನಿಸಿದ್ದನು. ಬಾರ್​ನಲ್ಲಿ ಆಕೆಯ ಸ್ನೇಹಿತರು ಆಕೆಗೆ ನಿದ್ರೆ ಮಾತ್ರೆ ಹಾಕಿರುವ ತಂಪು ಪಾನೀಯವನ್ನು ಕುಡಿಯುವಂತೆ ಒತ್ತಾಯಿಸಿದ್ದಾರೆ. ಈಕೆ ಹಲವು ಬಾರಿ ನಿರಾಕರಿಸಿದರೂ ಆಕೆಯ ಸ್ನೇಹಿತರು ಕುಡಿಯುವಂತೆ ಒತ್ತಾಯಿಸಿದ್ದರು. ನಂತರ ಬಾಲಕಿ ಪ್ರಜ್ಞಾಹೀನಳಾಗಿದ್ದಾಳೆ. ಈ ವೇಳೆ ಆಕೆಯ ಸ್ನೇಹಿತ ಹಾಗೂ ಮತ್ತು ಆತನ ಗೆಳೆಯರು ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಂದೆ ಆರೋಪಿಸಿದ್ದಾರೆ.
ಈ ವೇಳೆ ಬಾಲಕಿಯು ಪ್ರತಿರೋಧ ವ್ಯಕ್ತಪಡಿಸಿದ್ದು, ಆಗ ಯುವಕರು ಆಕೆಯ ಕೆನ್ನೆ ಮತ್ತು ಹಣೆಯ ಮೇಲೆ ಗಾಯಗೊಳಿಸಿದ್ದಾರೆ. ಬಳಿಕ ಬಾಲಕಿ ಹೇಗೋ ಅವರ ಕೈಯಿಂದ ತಪ್ಪಿಸಿಕೊಂಡು ತನ್ನ ಮನೆ ಆಗಮಿಸಿದ್ದಾಳೆ. ಆದ ಘಟನೆ ಬಗ್ಗೆ ತನ್ನ ತಂದೆಯಲ್ಲಿ ವಿವರಿಸಿದ್ದಾಳೆ. ಅಷ್ಟೇ ಅಲ್ಲದೆ ಆರೋಪಿ ಇನ್‌ಸ್ಟಾಗ್ರಾಮ್ ಸ್ನೇಹಿತ ನನ್ನ ಅಶ್ಲೀಲ ವಿಡಿಯೋ ಸೆರೆ ಹಿಡಿದು ಕೆಲವು ದಿನಗಳಿಂದ ಬ್ಲಾಕ್‌ಮೇಲ್ ಮಾಡುತ್ತಿದ್ದ. ಜೊತೆಗೆ ಅಶ್ಲೀಲ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ತನ್ನ ತಂದೆ ಬಳಿ ಹೇಳಿದ್ದಾಳೆ.
ಕಳೆದ ಶುಕ್ರವಾದ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಾಲಕಿಯ ತಂದೆ ಎಂಟು ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

21 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

21 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

21 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

21 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

21 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

21 hours ago