Latest

ಅಪ್ರಾಪ್ತ ಸ್ನೇಹಿತೆ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ.

ವೈದ್ಯರೊಬ್ಬರ ಅಪ್ರಾಪ್ತ ಮಗಳ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಉತ್ತರಪ್ರದೇಶದ ಕಾನ್ಪುರದ ಬರ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಹುಕ್ಕಾ ಬಾರ್‌ನಲ್ಲಿ ನಡೆದಿದೆ.
ಇಲ್ಲಿನ ಬರ್ರಾ ನಿವಾಸಿಯಾಗಿರುವ ಇನ್‌ಸ್ಟಾಗ್ರಾಮ್ ಸ್ನೇಹಿತ ತನ್ನ ಮಗಳನ್ನು ಹುಕ್ಕಾ ಬಾರ್‌ಗೆ ಆಹ್ವಾನಿಸಿದ್ದನು. ಬಾರ್​ನಲ್ಲಿ ಆಕೆಯ ಸ್ನೇಹಿತರು ಆಕೆಗೆ ನಿದ್ರೆ ಮಾತ್ರೆ ಹಾಕಿರುವ ತಂಪು ಪಾನೀಯವನ್ನು ಕುಡಿಯುವಂತೆ ಒತ್ತಾಯಿಸಿದ್ದಾರೆ. ಈಕೆ ಹಲವು ಬಾರಿ ನಿರಾಕರಿಸಿದರೂ ಆಕೆಯ ಸ್ನೇಹಿತರು ಕುಡಿಯುವಂತೆ ಒತ್ತಾಯಿಸಿದ್ದರು. ನಂತರ ಬಾಲಕಿ ಪ್ರಜ್ಞಾಹೀನಳಾಗಿದ್ದಾಳೆ. ಈ ವೇಳೆ ಆಕೆಯ ಸ್ನೇಹಿತ ಹಾಗೂ ಮತ್ತು ಆತನ ಗೆಳೆಯರು ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಂದೆ ಆರೋಪಿಸಿದ್ದಾರೆ.
ಈ ವೇಳೆ ಬಾಲಕಿಯು ಪ್ರತಿರೋಧ ವ್ಯಕ್ತಪಡಿಸಿದ್ದು, ಆಗ ಯುವಕರು ಆಕೆಯ ಕೆನ್ನೆ ಮತ್ತು ಹಣೆಯ ಮೇಲೆ ಗಾಯಗೊಳಿಸಿದ್ದಾರೆ. ಬಳಿಕ ಬಾಲಕಿ ಹೇಗೋ ಅವರ ಕೈಯಿಂದ ತಪ್ಪಿಸಿಕೊಂಡು ತನ್ನ ಮನೆ ಆಗಮಿಸಿದ್ದಾಳೆ. ಆದ ಘಟನೆ ಬಗ್ಗೆ ತನ್ನ ತಂದೆಯಲ್ಲಿ ವಿವರಿಸಿದ್ದಾಳೆ. ಅಷ್ಟೇ ಅಲ್ಲದೆ ಆರೋಪಿ ಇನ್‌ಸ್ಟಾಗ್ರಾಮ್ ಸ್ನೇಹಿತ ನನ್ನ ಅಶ್ಲೀಲ ವಿಡಿಯೋ ಸೆರೆ ಹಿಡಿದು ಕೆಲವು ದಿನಗಳಿಂದ ಬ್ಲಾಕ್‌ಮೇಲ್ ಮಾಡುತ್ತಿದ್ದ. ಜೊತೆಗೆ ಅಶ್ಲೀಲ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ತನ್ನ ತಂದೆ ಬಳಿ ಹೇಳಿದ್ದಾಳೆ.
ಕಳೆದ ಶುಕ್ರವಾದ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಾಲಕಿಯ ತಂದೆ ಎಂಟು ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

14 minutes ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

5 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

5 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

5 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

5 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

10 hours ago