Latest

ತನ್ನ ಲವರ್ ನ ಜೊತೆ ಮಗಳ ಮದುವೆ ಮಾಡಿಸಿದ ತಾಯಿ.

ಮದುವೆಯಾಗಿ 15 ವರ್ಷದ ಮಗಳಿದ್ದರೂ ಬೇರೊಬ್ಬ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ತನ್ನ ಅನೈತಿಕ ಸಂಬಂಧಕ್ಕೆ ಅನುಕೂಲವಾಗಲೆಂದು ಮಗಳ ಜೀವನವನ್ನೇ ಹಾಳು ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಆಕೆಯ ತಾಯಿ ತನ್ನ 28 ವರ್ಷದ ಪ್ರೇಮಿಯೊಂದಿಗೆ ಬಲವಂತವಾಗಿ ವಿವಾಹ ಮಾಡಿದ್ದಾಳೆ. ಅಲ್ಲದೆ, ತನ್ನ ಪ್ರಿಯಕರನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಳ್ಳಲು ತಾಯಿಯೇ ಮಗಳನ್ನು ಒತ್ತಾಯಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
15 ವರ್ಷದ ಬಾಲಕಿ ತನ್ನ ತಾಯಿ ತನಗೆ ನೀಡುತ್ತಿರುವ ಕಿರುಕುಳದ ಬಗ್ಗೆ ತನ್ನ ಗೆಳತಿಯೊಂದಿಗೆ ಹೇಳಿಕೊಂಡಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಷಯವನ್ನು ಮಹಿಳಾ ಸಾಮಾಜಿಕ ಕಾರ್ಯಕರ್ತೆಯೊಬ್ಬರಿಗೆ ತಿಳಿಸಿದ್ದಾರೆ. ಆಕೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
15 ವರ್ಷದ ಬಾಲಕಿಯೊಂದಿಗೆ ಮದುವೆಯಾದ ಯುವಕ ಆಕೆಯ ತಾಯಿಯ ದೂರದ ಸಂಬಂಧಿಯಾಗಿದ್ದು, ಆತನೊಂದಿಗೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದ ಮಹಿಳೆ ಆತನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿದರೆ ಆತ ತನ್ನ ಮನೆಯಲ್ಲೇ ಇರುತ್ತಾನೆ. ಆಗ ತಮ್ಮಿಬ್ಬರ ಅಕ್ರಮ ಸಂಬಂಧದ ಬಗ್ಗೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಈ ರೀತಿ ಮಾಡಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾಳೆ.
ಮಗಳಿಗೆ ಬೆದರಿಕೆ ಹಾಕಿದ ಆ ಮಹಿಳೆ ಈ ಮದುವೆಗೆ ಒಪ್ಪದಿದ್ದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಇದರಿಂದ ಹೆದರಿ ಆ ಬಾಲಕಿ ಮದುವೆಗೆ ಒಪ್ಪಿದ್ದಳು. ನವೆಂಬರ್ 6ರಂದು ಆ ಹುಡುಗಿಯನ್ನು ಅಹ್ಮದ್‌ನಗರದ ದೇವಸ್ಥಾನದಲ್ಲಿ ಮದುವೆ ಮಾಡಿಕೊಡಲಾಗಿತ್ತು. ಆ ಯುವಕ ಬಾಲಕಿಯೊಂದಿಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ. ಅದಕ್ಕೆ ಆಕೆ ವಿರೋಧಿಸಿದಾಗ ಆಕೆಯ ತಾಯಿ ಹೆದರಿಸಿ ಒಪ್ಪಿಸಿದ್ದಳು ಎಂದು ಹೇಳಲಾಗುತಿದೆ.
36 ವರ್ಷದ ಮಹಿಳೆ ಮತ್ತು ಆಕೆಯ 28 ವರ್ಷದ ಪ್ರೇಮಿಯನ್ನು ಪೋಕ್ಸೊ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago