ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು ಹೋದ ಬಳಿಕ ನವಜಾತ ಶಿಶುವಿನ ಆರೈಕೆ ಹೇಗೆ ಮಾಡಬೇಕು ಎಂಬುದೇ ತಿಳಿಯದೆ ಆತ ಅನುಭವಿಸಿದ ನೋವು ನೋಡುಗರ ಕಣ್ಣಲ್ಲೂ ನೀರು ತರಿಸುತ್ತಿದೆ.
ವಿಡಿಯೊದಲ್ಲಿ ಕಾಣಿಸುವಂತೆ, ಹಾಲಿನ ಪುಡಿ ಖರೀದಿಸಲು ಫಾರ್ಮಸಿಗೆ ಬಂದ ತಂದೆ, ಅಲ್ಲಿನ ಸಿಬ್ಬಂದಿಯನ್ನು ಉದ್ದೇಶಿಸಿ, “ಅಣ್ಣ, ಇದನ್ನು ನನ್ನ ಮಗಳಿಗೆ ಹೇಗೆ ಕುಡಿಸಬೇಕು? ಆಕೆಯ ತಾಯಿ ಇದ್ದಿದ್ದರೆ ಹೇಗೆ ತಯಾರಿಸಬೇಕೆಂದು ತಿಳಿಯುತ್ತಿತ್ತು” ಎಂದು ಕೇಳುವ ಕ್ಷಣ ಅನೇಕರ ಹೃದಯ ಮುಟ್ಟಿದೆ.
ಬಳಿಕ ಕಣ್ಣೀರನ್ನು ತಡೆದುಕೊಳ್ಳಲಾಗದೆ, “ನನ್ನ ಹೆಂಡತಿ ಮತ್ತೊಬ್ಬನ ಜೊತೆ ಹೋಗಿದ್ದಾಳೆ” ಎಂದು ಹೇಳುವಾಗ, ಒಬ್ಬ ತಂದೆಯ ಅಸಹಾಯಕತೆ, ಮುರಿದ ನಂಬಿಕೆ ಮತ್ತು ಪುಟ್ಟ ಮಗುವಿನ ಭವಿಷ್ಯದ ಚಿಂತೆ ಸ್ಪಷ್ಟವಾಗಿ ವ್ಯಕ್ತವಾಗುತ್ತದೆ.
His wife ran away with another man.
— Krishnan Gaur (@Mercedes5494) June 25, 2026
The father comes home after a day of manual labor, only to find his little daughter crying from hunger.
He searches the house for his wife, then learns that she has run away with another man.
He goes to a pharmacy to buy Lactogen milk… pic.twitter.com/MqwbHZPcwC
ಈ ಘಟನೆ ಕೇವಲ ಒಬ್ಬ ವ್ಯಕ್ತಿಯ ನೋವಷ್ಟೇ ಅಲ್ಲ, ಕುಟುಂಬ ಸಂಬಂಧಗಳ ಮಹತ್ವ ಮತ್ತು ಮಕ್ಕಳ ಮೇಲಿನ ಪಾಲಕರ ಜವಾಬ್ದಾರಿಯ ಕುರಿತು ಸಮಾಜದಲ್ಲಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೊ ನೋಡಿ ಅನೇಕರು ತಂದೆಯ ಪರಿಸ್ಥಿತಿಗೆ ಮರುಕ ವ್ಯಕ್ತಪಡಿಸುತ್ತಿದ್ದು, ಮಗುವಿನ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸುತ್ತಿದ್ದಾರೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಶಿರಬಡಗಿ ಗ್ರಾಮದಲ್ಲಿ ನಡೆದ ಒಂದು ಘಟನೆ ಕುಟುಂಬ ಸಂಬಂಧಗಳಿಗಿಂತ ಆಸ್ತಿ ವಿವಾದವೇ ಎಷ್ಟು ಭೀಕರ…