Latest

ಹೆಣ್ಣು ಮಗುವಿಗೆ ಜನ್ಮ ಕೊಟ್ಟ ಕಾರಣಕ್ಕಾಗಿ ಹಿಂದೂ ಯುವತಿಗೆ ಕೈ ಕೊಟ್ಟ ಮುಸ್ಲಿಂ!

ಇಸ್ಲಾಂಗೆ ಮತಾಂತರವಾಗಿ ಮದುವೆಯಾಗಿದ್ದ ಹಿಂದೂ ಮಹಿಳೆಯನ್ನು ಹೆರಿಗೆಗೆ ಎಂದು ತವರು ಮನೆಗೆ ಕಳುಹಿಸಿ ಅಬ್ದುಲ್‌ ರಹೀಂ ಎಂಬಾತ ಎರಡನೇ ಮದುವೆಯಾಗಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಬನಶಂಕರಿ 3ನೇ ಹಂತದ ಇಟ್ಟುಮಡು ನಿವಾಸಿ 25 ವರ್ಷದ ಸಂತ್ರಸ್ತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ದೂರಿನನ್ವಯ ಆಂಧ್ರಪ್ರದೇಶ ಮೂಲದ ಪತಿ ಅಬ್ದುಲ್‌ ರಹೀಂ, ಮಾವ ಅಫೀಜ್‌, ಅತ್ತೆ ರಶೀದಾ ಮತ್ತು ಅಬ್ದುಲ್‌ ರಹೀಂನ 2ನೇ ಪತ್ನಿ ನಸ್ರೀನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಂತ್ರಸ್ತೆ ಐದು ವರ್ಷಗಳ ಹಿಂದೆ ನಗರದಲ್ಲಿ ಬಿಕಾಂ ಓದುತ್ತಿದ್ದಾಗ ಆರೋಪಿ ಅಬ್ದುಲ್‌ ರಹೀಂ ಪರಿಚಿತವಾಗಿತ್ತು. ರಿಚ್ಮಂಡ್‌ ಸರ್ಕಲ್‌ ಖಾಸಗಿ ಹೋಟೆಲ್‌ನಲ್ಲಿ ಈವೆಂಟ್‌ ಆರ್ಗನೈಸರ್‌ ಅಬ್ದುಲ್‌ ರಹೀಂ ಕೆಲಸ ಮಾಡುತ್ತಿದ್ದ. ಪರಿಚಯ ಪ್ರೇಮಕ್ಕೆ ತಿರುಗಿ ಮದುವೆಯಾಗಲು ನಿರ್ಧರಿಸಿದ್ದರು. ಇಬ್ಬರ ಪ್ರೀತಿಯ ವಿಷಯ ಮನೆಯವರಿಗೆ ಗೊತ್ತಾಗಿ ಅಬ್ದುಲ್‌ ರಹೀಂ ಪೋಷಕರು, ಸಂತ್ರಸ್ತೆ ಇಸ್ಲಾಂಗೆ ಮತಾಂತರವಾದರೆ ಮದುವೆಗೆ ಒಕೆ ಎಂದಿದ್ದರು. ಹೀಗಾಗಿ ಅನ್ಯ ಮಗಳ ಪ್ರೀತಿಗೆ ಬೆಂಬಲವಾಗಿ ನಿಂತ ಸಂತ್ರಸ್ಥೆ ಪೋಷಕರು, ಮಗಳು ಇಸ್ಲಾಂಗೆ ಮತಾಂತರವಾಗಲು ಒಪ್ಪಿದ್ದರು.
2020ರ ಫೆ.6ರಂದು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮಸೀದಿಯಲ್ಲಿ ಸಂತ್ರಸ್ತೆ ಇಸ್ಲಾಂಗೆ ಧರ್ಮಕ್ಕೆ ಮತಾಂತರವಾಗಿ ಕುಟುಂಸ್ಥರು ಸಮಕ್ಷಮದಲ್ಲಿ ಮದುವೆಯಾಗಿದ್ದಳು. ಮದುವೆಯಾದ ಮೇಲೆ ಆರೋಪಿ ಅಬ್ದುಲ್‌ ರಹೀಂ ಒಂದೂವರೆ ವರ್ಷ ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಂಡಿದ್ದ. ಈ ನಡುವೆ ಸಂತ್ರಸ್ತೆ ಗರ್ಭಿಣಿಯಾದ ಬಳಿಕ ವರಸೆ ಬದಲಿಸಿದ ಅತ್ತೆ-ಮಾವ ವರದಕ್ಷಿಣೆ ಕಿರುಕುಳ ನೀಡಲು ಆರಂಭಿಸಿದ್ದರು ಎನ್ನಲಾಗಿದೆ. ಇತ್ತ ಮಗಳನ್ನು ನೋಡಲು ಆಂಧ್ರಕ್ಕೆ ಹೋದಗಾಲೆಲ್ಲಾ ಸಂತ್ರಸ್ತೆ ಪೋಷಕರು ಅಳಿಯನಿಗೆ ಹಣ ಕೊಟ್ಟು ಬರುತ್ತಿದ್ದರು. ಆದರೆ ಹೆರಿಗೆ ನೆಪದಲ್ಲಿ ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆತಂದು ರಹೀಂ ಇಲ್ಲಿಯೆ ಬಿಟ್ಟು ಹೋಗಿದ್ದ. ಹೀಗೆ 2021ರ ನವೆಂಬರ್ 30ರಂದು ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಇದನ್ನು ತಿಳಿದ ಪತಿ ಮತ್ತು ಅತ್ತೆ, ಮಾವ ಬಾಣಂತಿಯನ್ನು ನೋಡಲು ಸಹ ಬಂದಿರಲಿಲ್ಲ. ಕೆಲ ದಿನಗಳ ನಂತರ ಪತಿ ಅಬ್ದುಲ್‌ ರಹೀಂ ಪತ್ನಿ ಹಾಗೂ ಮಗುವನ್ನು ನೋಡಿಕೊಂಡು ಹೋಗಿದ್ದ. ಹೀಗಾಗಿ ಸಂತ್ರಸ್ತೆಯ ಪೋಷಕರು ಸಂತ್ರಸ್ತೆ ಹಾಗೂ ಮಗುವನ್ನು ಆಂಧ್ರಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಆಗ ಆಬ್ದುಲ್‌ ರಹೀಂ ಪೋಷಕರು ಹೆಣ್ಣು ಮಗು ಆಗಿದೆ. ಮನೆಗೆ ಸೇರಿಸುವುದಿಲ್ಲ.
ಮಗನಿಗೆ ಬೇರೊಂದು ಮದುವೆ ಮಾಡುವುದಾಗಿ ಜಗಳವಾಡಿ ವಾಪಸ್ ಕಳುಹಿಸಿದ್ದಾರೆ. ಈ ನಡುವೆ ಆರೋಪಿ ಅಬ್ದುಲ್‌ ರಹೀಂ ಬೇರೆ ಯುವತಿ ಜೊತೆ ಮದುವೆಯಾಗಿ ಆಕೆಗೆ ಒಂದು ಗುಂಡು ಮಗು ಇದೆ ಎಂಬ ವಿಚಾರ ಸಂತ್ರಸ್ತೆಗೆ ತಿಳಿದಿದೆ. ಈ ಬಗ್ಗೆ ಪ್ರಶ್ನೆ ಮಾಡಿದಾಗ ಅಬ್ದುಲ್‌ ರಹೀಂ ಹಾಗೂ ಆತನ ಪೋಷಕರು, ಸಂತ್ರಸ್ತೆ ಹಾಗೂ ಆಕೆಯ ಪೋಷಕರಿಗೆ ಪ್ರಾಣ ಬೆದರಿಕೆ ಹಾಕಿದ್ದಾರೆ. ಇಷ್ಟೇ ಅಲ್ಲದೇ ಆರೋಪಿ ಅಬ್ದುಲ್‌ ರಹೀಂ ವಿಚ್ಛೇದನ ನೀಡುವಂತೆ ಸಂತ್ರಸ್ತೆಗೆ ಒತ್ತಾಯಿಸುತ್ತಿದ್ದ. ಸಂತ್ರಸ್ತೆಯ ಫೋಟೋಗಳನ್ನು ಬೇರೆ ಪುರುಷರ ಇದ್ದಂತೆ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿ ವೇಶ್ಯೆ ಎಂದು ಅಪಪ್ರಚಾರ ಮಾಡಿದ್ದ. ವಿಚ್ಛೇದನಕ್ಕೆ ಸಹಿ ಮಾಡದಿದ್ದಲ್ಲಿ ಇನ್ನೂ ಬೇರೆ ರೀತಿ ಮರ್ಯಾದೆ ತೆಗೆಯುವುದಾಗಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಆಂಧ್ರಕ್ಕೆ ತೆರಳಿ ಆರೋಪಿಯನ್ನು ಎಳೆದು ತರುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

4 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

4 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

23 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago