Latest

ಹೆಣ್ಣು ಮಗುವಿಗೆ ಜನ್ಮ ಕೊಟ್ಟ ಕಾರಣಕ್ಕಾಗಿ ಹಿಂದೂ ಯುವತಿಗೆ ಕೈ ಕೊಟ್ಟ ಮುಸ್ಲಿಂ!

ಇಸ್ಲಾಂಗೆ ಮತಾಂತರವಾಗಿ ಮದುವೆಯಾಗಿದ್ದ ಹಿಂದೂ ಮಹಿಳೆಯನ್ನು ಹೆರಿಗೆಗೆ ಎಂದು ತವರು ಮನೆಗೆ ಕಳುಹಿಸಿ ಅಬ್ದುಲ್‌ ರಹೀಂ ಎಂಬಾತ ಎರಡನೇ ಮದುವೆಯಾಗಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಬನಶಂಕರಿ 3ನೇ ಹಂತದ ಇಟ್ಟುಮಡು ನಿವಾಸಿ 25 ವರ್ಷದ ಸಂತ್ರಸ್ತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ದೂರಿನನ್ವಯ ಆಂಧ್ರಪ್ರದೇಶ ಮೂಲದ ಪತಿ ಅಬ್ದುಲ್‌ ರಹೀಂ, ಮಾವ ಅಫೀಜ್‌, ಅತ್ತೆ ರಶೀದಾ ಮತ್ತು ಅಬ್ದುಲ್‌ ರಹೀಂನ 2ನೇ ಪತ್ನಿ ನಸ್ರೀನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಂತ್ರಸ್ತೆ ಐದು ವರ್ಷಗಳ ಹಿಂದೆ ನಗರದಲ್ಲಿ ಬಿಕಾಂ ಓದುತ್ತಿದ್ದಾಗ ಆರೋಪಿ ಅಬ್ದುಲ್‌ ರಹೀಂ ಪರಿಚಿತವಾಗಿತ್ತು. ರಿಚ್ಮಂಡ್‌ ಸರ್ಕಲ್‌ ಖಾಸಗಿ ಹೋಟೆಲ್‌ನಲ್ಲಿ ಈವೆಂಟ್‌ ಆರ್ಗನೈಸರ್‌ ಅಬ್ದುಲ್‌ ರಹೀಂ ಕೆಲಸ ಮಾಡುತ್ತಿದ್ದ. ಪರಿಚಯ ಪ್ರೇಮಕ್ಕೆ ತಿರುಗಿ ಮದುವೆಯಾಗಲು ನಿರ್ಧರಿಸಿದ್ದರು. ಇಬ್ಬರ ಪ್ರೀತಿಯ ವಿಷಯ ಮನೆಯವರಿಗೆ ಗೊತ್ತಾಗಿ ಅಬ್ದುಲ್‌ ರಹೀಂ ಪೋಷಕರು, ಸಂತ್ರಸ್ತೆ ಇಸ್ಲಾಂಗೆ ಮತಾಂತರವಾದರೆ ಮದುವೆಗೆ ಒಕೆ ಎಂದಿದ್ದರು. ಹೀಗಾಗಿ ಅನ್ಯ ಮಗಳ ಪ್ರೀತಿಗೆ ಬೆಂಬಲವಾಗಿ ನಿಂತ ಸಂತ್ರಸ್ಥೆ ಪೋಷಕರು, ಮಗಳು ಇಸ್ಲಾಂಗೆ ಮತಾಂತರವಾಗಲು ಒಪ್ಪಿದ್ದರು.
2020ರ ಫೆ.6ರಂದು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮಸೀದಿಯಲ್ಲಿ ಸಂತ್ರಸ್ತೆ ಇಸ್ಲಾಂಗೆ ಧರ್ಮಕ್ಕೆ ಮತಾಂತರವಾಗಿ ಕುಟುಂಸ್ಥರು ಸಮಕ್ಷಮದಲ್ಲಿ ಮದುವೆಯಾಗಿದ್ದಳು. ಮದುವೆಯಾದ ಮೇಲೆ ಆರೋಪಿ ಅಬ್ದುಲ್‌ ರಹೀಂ ಒಂದೂವರೆ ವರ್ಷ ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಂಡಿದ್ದ. ಈ ನಡುವೆ ಸಂತ್ರಸ್ತೆ ಗರ್ಭಿಣಿಯಾದ ಬಳಿಕ ವರಸೆ ಬದಲಿಸಿದ ಅತ್ತೆ-ಮಾವ ವರದಕ್ಷಿಣೆ ಕಿರುಕುಳ ನೀಡಲು ಆರಂಭಿಸಿದ್ದರು ಎನ್ನಲಾಗಿದೆ. ಇತ್ತ ಮಗಳನ್ನು ನೋಡಲು ಆಂಧ್ರಕ್ಕೆ ಹೋದಗಾಲೆಲ್ಲಾ ಸಂತ್ರಸ್ತೆ ಪೋಷಕರು ಅಳಿಯನಿಗೆ ಹಣ ಕೊಟ್ಟು ಬರುತ್ತಿದ್ದರು. ಆದರೆ ಹೆರಿಗೆ ನೆಪದಲ್ಲಿ ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆತಂದು ರಹೀಂ ಇಲ್ಲಿಯೆ ಬಿಟ್ಟು ಹೋಗಿದ್ದ. ಹೀಗೆ 2021ರ ನವೆಂಬರ್ 30ರಂದು ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಇದನ್ನು ತಿಳಿದ ಪತಿ ಮತ್ತು ಅತ್ತೆ, ಮಾವ ಬಾಣಂತಿಯನ್ನು ನೋಡಲು ಸಹ ಬಂದಿರಲಿಲ್ಲ. ಕೆಲ ದಿನಗಳ ನಂತರ ಪತಿ ಅಬ್ದುಲ್‌ ರಹೀಂ ಪತ್ನಿ ಹಾಗೂ ಮಗುವನ್ನು ನೋಡಿಕೊಂಡು ಹೋಗಿದ್ದ. ಹೀಗಾಗಿ ಸಂತ್ರಸ್ತೆಯ ಪೋಷಕರು ಸಂತ್ರಸ್ತೆ ಹಾಗೂ ಮಗುವನ್ನು ಆಂಧ್ರಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಆಗ ಆಬ್ದುಲ್‌ ರಹೀಂ ಪೋಷಕರು ಹೆಣ್ಣು ಮಗು ಆಗಿದೆ. ಮನೆಗೆ ಸೇರಿಸುವುದಿಲ್ಲ.
ಮಗನಿಗೆ ಬೇರೊಂದು ಮದುವೆ ಮಾಡುವುದಾಗಿ ಜಗಳವಾಡಿ ವಾಪಸ್ ಕಳುಹಿಸಿದ್ದಾರೆ. ಈ ನಡುವೆ ಆರೋಪಿ ಅಬ್ದುಲ್‌ ರಹೀಂ ಬೇರೆ ಯುವತಿ ಜೊತೆ ಮದುವೆಯಾಗಿ ಆಕೆಗೆ ಒಂದು ಗುಂಡು ಮಗು ಇದೆ ಎಂಬ ವಿಚಾರ ಸಂತ್ರಸ್ತೆಗೆ ತಿಳಿದಿದೆ. ಈ ಬಗ್ಗೆ ಪ್ರಶ್ನೆ ಮಾಡಿದಾಗ ಅಬ್ದುಲ್‌ ರಹೀಂ ಹಾಗೂ ಆತನ ಪೋಷಕರು, ಸಂತ್ರಸ್ತೆ ಹಾಗೂ ಆಕೆಯ ಪೋಷಕರಿಗೆ ಪ್ರಾಣ ಬೆದರಿಕೆ ಹಾಕಿದ್ದಾರೆ. ಇಷ್ಟೇ ಅಲ್ಲದೇ ಆರೋಪಿ ಅಬ್ದುಲ್‌ ರಹೀಂ ವಿಚ್ಛೇದನ ನೀಡುವಂತೆ ಸಂತ್ರಸ್ತೆಗೆ ಒತ್ತಾಯಿಸುತ್ತಿದ್ದ. ಸಂತ್ರಸ್ತೆಯ ಫೋಟೋಗಳನ್ನು ಬೇರೆ ಪುರುಷರ ಇದ್ದಂತೆ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿ ವೇಶ್ಯೆ ಎಂದು ಅಪಪ್ರಚಾರ ಮಾಡಿದ್ದ. ವಿಚ್ಛೇದನಕ್ಕೆ ಸಹಿ ಮಾಡದಿದ್ದಲ್ಲಿ ಇನ್ನೂ ಬೇರೆ ರೀತಿ ಮರ್ಯಾದೆ ತೆಗೆಯುವುದಾಗಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಆಂಧ್ರಕ್ಕೆ ತೆರಳಿ ಆರೋಪಿಯನ್ನು ಎಳೆದು ತರುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ದೇವನಹಳ್ಳಿ: ಚಹಾ ಅಂಗಡಿ ಯುವಕನ ಮೇಲೆ ಪೊಲೀಸ್ ದೌರ್ಜನ್ಯ – ವೈರಲ್ ವಿಡಿಯೋಗೆ ಸಾರ್ವಜನಿಕರ ಆಕ್ರೋಶ

ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ‘ಹೈವೇ ನೆಸ್ಟ್’ ಚಹಾ ಅಂಗಡಿಯಲ್ಲಿ ನಡೆದ ದೌರ್ಜನ್ಯ ಪ್ರಕರಣ ಇದೀಗ…

1 hour ago

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

13 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

23 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

23 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

2 days ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

2 days ago