Latest

ಮೊಹಮ್ಮದ್ ನಿಸಾರ್ ಎಂಬ ಮುಸ್ಲಿಂ ವ್ಯಕ್ತಿ ನಿಜಲಿಂಗಸ್ವಾಮೀಜಿ ಹೆಸರಿನಿಂದ ಮಠಾಧಿಪತಿ.! ನಿಜಲಿಂಗನ ನಿಜಸ್ವರೂಪ ಬಯಲು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಚೌಡಹಳ್ಳಿಯಲ್ಲಿ ಇದ್ದ ಗುರುಮಲ್ಲೇಶ್ವರ ಶಾಖಾ ಮಠದಲ್ಲಿ ಭಾರಿ ವಿವಾದ ಸ್ಫೋಟವಾಗಿದೆ. ನಿಜಲಿಂಗಸ್ವಾಮೀಜಿ ಎಂಬ ಹೆಸರಿನಿಂದ ಮಠಾಧಿಪತಿಯಾಗಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ವಾಸ್ತವದಲ್ಲಿ ಮೊಹಮ್ಮದ್ ನಿಸಾರ್ ಎಂಬ ಮೂಲತಃ ಶಹಪುರ (ಯಾದಗಿರಿ ಜಿಲ್ಲೆ) ಮೂಲದ ಮುಸ್ಲಿಂ ವ್ಯಕ್ತಿಯೆಂಬ ವಿಚಾರ ಇದೀಗ ಸಾರ್ವಜನಿಕರ ಗಮನಸೆಳೆದಿದೆ.

ಸ್ವಾಮೀಜಿ ಎಂಬ ನಾಮಧಾರಿಯ ಹಿಂದಿನ ಜೀವನ, ವಿಡಿಯೋ ಮತ್ತು ಫೋಟೋಗಳ ಮೂಲಕ ಬಹಿರಂಗವಾಗಿದ್ದು, ಮಠದ ಶ್ರದ್ಧಾಳುಗಳು ಹಾಗೂ ಗ್ರಾಮಸ್ಥರಲ್ಲಿ ಭಾರೀ ಆಘಾತ ಮೂಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ದೃಶ್ಯಾವಳಿಗಳ ಪ್ರಕಾರ, ನಿಜಲಿಂಗಸ್ವಾಮೀಜಿ ತಮ್ಮ ಮಠದ ಕೋಣೆಯಲ್ಲಿಯೇ ಮದ್ಯಪಾನ, ಮಾಂಸಾಹಾರ ಸೇವನೆ ಹಾಗೂ ಯುವಕರೊಂದಿಗೆ ಅಸಭ್ಯ ವರ್ತನೆ ನಡೆಸುತ್ತಿರುವುದು ದೃಢವಾಗಿರುವುದಾಗಿ ಹೇಳಲಾಗಿದೆ.

ನಿಜಲಿಂಗಸ್ವಾಮೀಜಿ ಎಂಬ ಹೆಸರು ಪಡೆದ ಮೊಹಮ್ಮದ್ ನಿಸಾರ್ ಮೂಲ ಧರ್ಮವನ್ನು ಮರೆಮಾಚಿಕೊಂಡು, ಬಸವಕಲ್ಯಾಣದ ಬಸವಪ್ರಭು ಸ್ವಾಮೀಜಿಯಿಂದ ಜಂಗಮದೀಕ್ಷೆ ಪಡೆದಿದ್ದೇನೆ ಎಂಬ ನಾಟಕವಾಡಿದ್ದನು. ಮಠಾಧಿಪತಿಯಾಗಿ ನಿರಂತರವಾಗಿ ಚಟುವಟಿಕೆ ನಡೆಸುತ್ತಿದ್ದ ಈ ವ್ಯಕ್ತಿ, ಮತಾಂತರವಾದ ಬಳಿಕವೂ ತನ್ನ ಹಿಂದಿನ ಹೆಸರು — ಮೊಹಮ್ಮದ್ ನಿಸಾರ್ — ಅನ್ನು ಅಧಿಕೃತ ದಾಖಲೆಗಳಲ್ಲಿ ಉಳಿಸಿಕೊಂಡಿದ್ದನು.

ಈ ಹಿನ್ನೆಲೆಯಲ್ಲಿ ಕೆಲ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾಗ, ಇತ್ತೀಚೆಗಷ್ಟೇ ಆನ್‌ಲೈನ್ ಮೂಲಕ ಮುಸ್ಲಿಂ ಧಾರ್ಮಿಕ ಪರಿಧಾನವಾದ ಟೋಪಿ ತರಿಸಿಕೊಂಡಿರುವುದೂ ಗೊತ್ತಾಗಿದ್ದು, ವಿಷಯ ಮತ್ತಷ್ಟು ಉದ್ವಿಗ್ನಗೊಂಡಿದೆ. ವಿಚಾರಣೆಗೆ ಒಳಗಾದಾಗ ನಿಜಲಿಂಗಸ್ವಾಮೀಜಿ ತನ್ನ ಹಿಂದಿನ ಧರ್ಮ ಮತ್ತು ಮತಾಂತರದ ವಿಚಾರವನ್ನು ಒಪ್ಪಿಕೊಂಡಿದ್ದಾನೆ.

ಸ್ಥಳೀಯ ಆಕ್ರೋಶದ ಬೆನ್ನಲ್ಲೇ, ನಿಜಲಿಂಗಸ್ವಾಮೀಜಿ ಮಠದಿಂದ ತನ್ನ ಬಳಿಯ ವಸ್ತುಗಳನ್ನು ಕೊಂಡೊಯ್ದು ಬೈಕ್‌ನಲ್ಲಿ ನಿಗೂಢವಾಗಿ ಪರಾರಿಯಾಗಿದ್ದಾನೆ. ಈಗ ನಿಸಾರ್ ಎಂಬ ಈ ವ್ಯಕ್ತಿ ಪೀಠವನ್ನು ತ್ಯಜಿಸಿರುವುದಾಗಿ ಹೇಳಿ, ಎಲ್ಲರ ಗಮನದಿಂದ ತಪ್ಪಿಸಿಕೊಂಡಿದ್ದಾನೆ.

ಈ ಘಟನೆಯಿಂದ ಚೌಡಹಳ್ಳಿ ಗ್ರಾಮದಲ್ಲಿ ಸಂಚಲನವೇಳಿ, ನಿಜಲಿಂಗಸ್ವಾಮೀಜಿ ಎಂಬ ನಾಮದಿಂದ ಮಠದ ಪ್ರಮುಖ ಸ್ಥಾನವನ್ನು ಪಡೆದಿದ್ದ ವ್ಯಕ್ತಿಯ ನಿಜ ಪರಿಚಯ ಬೆಳಕಿಗೆ ಬಂದು ಶ್ರದ್ಧಾಳುಗಳು ಹಾಗೂ ನಾಗರಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರಕರಣ ‘ಧರ್ಮಕ್ಕೆ ದ್ರೋಹ’, ‘ಅಕ್ಷರ ದಾಸೋಹದ ಅವಮಾನ’ ಎಂಬಂತೆ ಟೀಕೆಗಳಿಗೆ ಕಾರಣವಾಗಿದೆ.

ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹವೂ ಗ್ರಾಮಸ್ಥರಿಂದ ಕೇಳಿಬರುತ್ತಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

15 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

15 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

15 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

15 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago