Latest

ಜಪಾನ್ ಕಡಲತೀರದಲ್ಲಿ ನಿಗೂಢ ಚೆಂಡು ಪತ್ತೆ

ಚೀನಾ, ಅಮೆರಿಕ ನಂತರ ಈಗ ಜಪಾನ್ ನಲ್ಲಿ ಏಲಿಯನ್ ಗಳ ಬಗ್ಗೆ ಚರ್ಚೆ ಶುರುವಾಗಿದೆ. ಜಪಾನ್‌ನ ಶಿಜುವೊಕಾ ಪ್ರಾಂತ್ಯದ ಹಮಾಮತ್ಸು ನಗರದ ಕಡಲತೀರದಲ್ಲಿ ಪತ್ತೆಯಾಗಿರುವ ನಿಗೂಢ ಚೆಂಡು ಇದಕ್ಕೆ ಕಾರಣ. ಒಂದೂವರೆ ಮೀಟರ್ ವ್ಯಾಸದ ಚೆಂಡಿನ ಮೇಲೆ ಮಣ್ಣಿನ ಹಲವಾರು ಪದರಗಳನ್ನು ಜೋಡಿಸಲಾಗಿದೆ. ಈ ಚೆಂಡಿನಿಂದಾಗಿ ಸಾಮಾನ್ಯ ಜನರಿಗೆ ಬೀಚ್‌ಗೆ ಪ್ರವೇಶಿಸದಂತೆ ನಿರ್ಭಂಧಿಸಲಾಗಿದೆ. ಈ ಚೆಂಡು ಇಲ್ಲಿಗೆ ಹೇಗೆ ಬಂತು ಎಂಬುದು ಇಲ್ಲಿಯವರೆಗೆ ತಿಳಿದುಬಂದಿಲ್ಲ.
ಇದು ಏಲಿಯನ್ ಅಥವಾ ಏನಾದರೂ ಇರಬಹುದಾ ಎಂದು ಈ ಚೆಂಡನ್ನು ತನಿಖೆ ಮಾಡಲು ಜಪಾನಿನ ಆತ್ಮರಕ್ಷಣಾ ಪಡೆಯ ಬಾಂಬ್ ನಿಷ್ಕ್ರಿಯ ದಳವನ್ನು ನಿಯೋಜಿಸಲಾಗಿದೆ. ಇದುವರೆಗೂ ಅದು ಏನು ಎಂಬುದು ತನಿಖೆಯಲ್ಲಿ ಸ್ಪಷ್ಟವಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ, ಕೆಲವರು ಇದನ್ನು ಸಮುದ್ರ ಗಣಿ ಎಂದು ಕರೆಯುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಇದು ಒಂದು ರೀತಿಯ ಹಾರುವ ತಟ್ಟೆಯಾಗಿರಬಹುದು ಎಂದು ಹೇಳುತ್ತಾರೆ. ಮಾಧ್ಯಮ ವರದಿಗಳ ಪ್ರಕಾರ, ಈ ನಿಗೂಢ ಚೆಂಡು ಒಂದೂವರೆ ಮೀಟರ್ ವ್ಯಾಸವಿದ್ದು, ಲೋಹದಿಂದ ಮಾಡಲ್ಪಟ್ಟಿದೆ. ಇದು ಎರಡೂ ಬದಿಗಳಲ್ಲಿ ಕೊಕ್ಕೆಗಳನ್ನು ಹೊಂದಿದೆ. ಈ ಚೆಂಡನ್ನು ಸಮುದ್ರ ತೀರದಲ್ಲಿ ಸಾಗುತ್ತಿದ್ದಾಗ ವ್ಯಕ್ತಿಯೊಬ್ಬರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದು ಎರಡನೇ ಮಹಾಯುದ್ಧದ ಬಾಂಬ್ ಆಗಿರಬಹುದು ಎಂದು ಮೊದಲು ಶಂಕಿಸಲಾಗಿತ್ತು. ಹೀಗಾಗಿ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿದೆ.
ಬಾಂಬ್ ವದಂತಿ ಹರಡಿದಾಗ ಚೆಂಡಿನ ಎಕ್ಸ್-ರೇ ಪರೀಕ್ಷೆಯನ್ನು ಮಾಡಲಾಯಿತು. ಈ ನಿಗೂಢ ಚೆಂಡು ಒಳಗಿನಿಂದ ಟೊಳ್ಳಾಗಿದ್ದು, ಯಾವುದೇ ರೀತಿಯ ಸ್ಫೋಟದ ಅಪಾಯವಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಅದರ ಹಲವು ಚಿತ್ರಗಳನ್ನು ಜಪಾನ್‌ನ ಸ್ವಯಂ ರಕ್ಷಣಾ ಪಡೆ ಮತ್ತು ಕೋಸ್ಟ್ ಗಾರ್ಡ್‌ನೊಂದಿಗೆ ಹಂಚಿಕೊಳ್ಳಲಾಗಿದೆ. ಈ ಚೆಂಡು ಸಾಮಾಜಿಕ ಮಾಧ್ಯಮದಲ್ಲಿ ಮತ್ತು ಜಪಾನ್ ಜನರಲ್ಲಿ ಚರ್ಚೆಯ ವಿಷಯವಾಗಿ ಉಳಿದಿದೆ.

ಭ್ರಷ್ಟರ ಬೇಟೆ

Recent Posts

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

6 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

16 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

16 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

1 day ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

1 day ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

1 day ago