Latest

ಪ್ರಿಯತಮನಿಗಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನ್ ಹುಡುಗಿ; ಪ್ರಿಯತಮೆ ಗಡಿಪಾರು ಪ್ರಿಯತಮ ಜೈಲು ಪಾಲು.

ಮುಲಾಯಂ ಸಿಂಗ್ ಕಳೆದ ಏಳು ವರ್ಷಗಳಿಂದ ಬೆಂಗಳೂರಿನ ಬೇರೆ ಬೇರೆ ಕಂಪನಿಗಳಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದ. ಈತನಿಗೆ ಆನ್‌ಲೈನ್‌ನಲ್ಲಿ ಲೂಡೋ ಆಡುವ ಅಭ್ಯಾಸವಿತ್ತು. ಹೀಗೆ ಆಟವಾಡುವಾಗ ಗೇಮ್ ಆಯಪಲ್ಲಿ ಪಾಕ್‌ ಯುವತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರು ಮದುವೆ ನಿರ್ಧಾರಕ್ಕೆ ಬಂದಿದ್ದರು. ಗೆಳತಿ ಪಾಕಿಸ್ತಾನದಲ್ಲಿದ್ದ ಕಾರಣ ನೇರವಾಗಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನ ಅರಿತಿದ್ದ ಮುಲಾಯಂ ಸಿಂಗ್ ಕರಾಚಿಯಿಂದ ದುಬೈಗೆ, ದುಬೈಯಿಂದ ನೇಪಾಳದ ಕಠ್ಮಂಡುಗೆ ಇಕ್ರಾಳನ್ನು ಕರೆಸಿಕೊಂಡಿದ್ದ. ನೇಪಾಳದಲ್ಲಿ ಇಬ್ಬರು ಮದುವೆಯಾಗಿದ್ದು ಬಳಿಕ ಕಳೆದ ಸೆಪ್ಟೆಂಬರ್‌ನಲ್ಲಿ ಬಿಹಾರದ ಗಡಿ ಪ್ರವೇಶಿಸಿ ಪಾಟ್ನಾಗೆ ಬಂದಿದ್ದರು. ಬಳಿಕ ರೈಲಿನ ಮುಖಾಂತರ ಬೆಂಗಳೂರಿಗೆ ಬಂದು ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದರು.
ಇತ್ತ ಇಕ್ರಾ ಜೀವನಿ ಪಾಕಿಸ್ತಾನದಲ್ಲಿರುವ ತಾಯಿ ಜೊತೆ ಮಾತನಾಡಲು ಕರೆ ಮಾಡುತ್ತಿದ್ದಳು. ಈ ವಿಷಯ ತಿಳಿದ ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಿತ್ತು. ಕರೆ ಆಧಾರದಲ್ಲಿ ಪೊಲೀಸರು ಮುಲಾಯಂನನ್ನು ಬಂಧಿಸಿ ಇಕ್ರಾಳನ್ನು ಎಫ್‌ಆರ್‌ಆರ್‌ಒ ಸುಪರ್ದಿಗೆ ಒಪ್ಪಿಸಿದ್ದರು. ಇಕ್ರಾ ಜೀವನಿ ಮೇಲೆ ಯಾವುದೇ ದೂರು ದಾಖಲಿಸಿರಲಿಲ್ಲ. ಈಕೆ ಪಾಕ್‌ ಪ್ರಜೆ ಎಂಬುದು ಸಾಬೀತಾದ ಹಿನ್ನೆಲೆ ವಿದೇಶಾಂಗ ಇಲಾಖೆಯ ಸಹಾಯದೊಂದಿಗೆ ಬೆಳ್ಳಂದೂರು ಪೊಲೀಸರು ವಾಘಾ – ಅಠಾರಿ ಗಡಿಯಲ್ಲಿ ಭಾನುವಾರ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಗಳಿಗೆ ಒಪ್ಪಿಸುವ ಮೂಲಕ ಗಡಿಪಾರು ಮಾಡಲಾಗಿದೆ. ಇನ್ನೂ ಗಡಿಪಾರು ಮಾಡುವ ಸಂದರ್ಭದಲ್ಲಿ ಇಕ್ರಾ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ ಎಂದು ಪೊಲೀಸರ ಮುಂದೆ ಅಂಗಲಾಚಿದ್ದಾಳೆ. ನಂತರ ಪೊಲೀಸರು ಆಕೆಯ ಮನವೊಲಿಸಿ ಗಡಿಪಾರು ಮಾಡಿ ಬಂದಿದ್ದಾರೆ ಎನ್ನಲಾಗಿದೆ.
ಇಕ್ರಾಳನ್ನು ಅಕ್ರಮವಾಗಿ ಗಡಿದಾಟಿಸಿ ತಂದ ತಪ್ಪಿಗೆ ಮುಲಾಯಂ ಸಿಂಗ್ ಮೇಲೆ ವಿದೇಶಿ ಕಾಯ್ದೆಯ ಅಡಿಯಲ್ಲಿ ದೇಶದ ಭದ್ರತೆಗೆ ಅಪಾಯ ತಂದ ಆರೋಪದಡಿ ಜೈಲಿಗೆ ಕಳುಹಿಸಲಾಗಿದೆ. ತನಿಖೆಯ ವೇಳೆ ಈಕೆ ರವಾ ಯಾದವ್‌ ಹೆಸರಿನಲ್ಲಿ ನಕಲಿ ಆಧಾರ್‌ ಕಾರ್ಡ್‌ ಪಡೆದ ವಿಚಾರ ಸಹ ಬೆಳಕಿಗೆ ಬಂದಿತ್ತು. ಅಷ್ಟೇ ಅಲ್ಲದೇ ಆ ಹೆಸರಿನಲ್ಲೇ ಪಾಸ್‌ಪೋರ್ಟ್‌ ಪಡೆಯಲು ಅರ್ಜಿ ಸಲ್ಲಿಸಿದ್ದ ವಿಷಯ ಸಹ ಬಯಲಾಗಿತ್ತು.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago