Latest

ಪ್ರಿಯತಮನಿಗಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನ್ ಹುಡುಗಿ; ಪ್ರಿಯತಮೆ ಗಡಿಪಾರು ಪ್ರಿಯತಮ ಜೈಲು ಪಾಲು.

ಮುಲಾಯಂ ಸಿಂಗ್ ಕಳೆದ ಏಳು ವರ್ಷಗಳಿಂದ ಬೆಂಗಳೂರಿನ ಬೇರೆ ಬೇರೆ ಕಂಪನಿಗಳಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದ. ಈತನಿಗೆ ಆನ್‌ಲೈನ್‌ನಲ್ಲಿ ಲೂಡೋ ಆಡುವ ಅಭ್ಯಾಸವಿತ್ತು. ಹೀಗೆ ಆಟವಾಡುವಾಗ ಗೇಮ್ ಆಯಪಲ್ಲಿ ಪಾಕ್‌ ಯುವತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರು ಮದುವೆ ನಿರ್ಧಾರಕ್ಕೆ ಬಂದಿದ್ದರು. ಗೆಳತಿ ಪಾಕಿಸ್ತಾನದಲ್ಲಿದ್ದ ಕಾರಣ ನೇರವಾಗಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನ ಅರಿತಿದ್ದ ಮುಲಾಯಂ ಸಿಂಗ್ ಕರಾಚಿಯಿಂದ ದುಬೈಗೆ, ದುಬೈಯಿಂದ ನೇಪಾಳದ ಕಠ್ಮಂಡುಗೆ ಇಕ್ರಾಳನ್ನು ಕರೆಸಿಕೊಂಡಿದ್ದ. ನೇಪಾಳದಲ್ಲಿ ಇಬ್ಬರು ಮದುವೆಯಾಗಿದ್ದು ಬಳಿಕ ಕಳೆದ ಸೆಪ್ಟೆಂಬರ್‌ನಲ್ಲಿ ಬಿಹಾರದ ಗಡಿ ಪ್ರವೇಶಿಸಿ ಪಾಟ್ನಾಗೆ ಬಂದಿದ್ದರು. ಬಳಿಕ ರೈಲಿನ ಮುಖಾಂತರ ಬೆಂಗಳೂರಿಗೆ ಬಂದು ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದರು.
ಇತ್ತ ಇಕ್ರಾ ಜೀವನಿ ಪಾಕಿಸ್ತಾನದಲ್ಲಿರುವ ತಾಯಿ ಜೊತೆ ಮಾತನಾಡಲು ಕರೆ ಮಾಡುತ್ತಿದ್ದಳು. ಈ ವಿಷಯ ತಿಳಿದ ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಿತ್ತು. ಕರೆ ಆಧಾರದಲ್ಲಿ ಪೊಲೀಸರು ಮುಲಾಯಂನನ್ನು ಬಂಧಿಸಿ ಇಕ್ರಾಳನ್ನು ಎಫ್‌ಆರ್‌ಆರ್‌ಒ ಸುಪರ್ದಿಗೆ ಒಪ್ಪಿಸಿದ್ದರು. ಇಕ್ರಾ ಜೀವನಿ ಮೇಲೆ ಯಾವುದೇ ದೂರು ದಾಖಲಿಸಿರಲಿಲ್ಲ. ಈಕೆ ಪಾಕ್‌ ಪ್ರಜೆ ಎಂಬುದು ಸಾಬೀತಾದ ಹಿನ್ನೆಲೆ ವಿದೇಶಾಂಗ ಇಲಾಖೆಯ ಸಹಾಯದೊಂದಿಗೆ ಬೆಳ್ಳಂದೂರು ಪೊಲೀಸರು ವಾಘಾ – ಅಠಾರಿ ಗಡಿಯಲ್ಲಿ ಭಾನುವಾರ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಗಳಿಗೆ ಒಪ್ಪಿಸುವ ಮೂಲಕ ಗಡಿಪಾರು ಮಾಡಲಾಗಿದೆ. ಇನ್ನೂ ಗಡಿಪಾರು ಮಾಡುವ ಸಂದರ್ಭದಲ್ಲಿ ಇಕ್ರಾ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ ಎಂದು ಪೊಲೀಸರ ಮುಂದೆ ಅಂಗಲಾಚಿದ್ದಾಳೆ. ನಂತರ ಪೊಲೀಸರು ಆಕೆಯ ಮನವೊಲಿಸಿ ಗಡಿಪಾರು ಮಾಡಿ ಬಂದಿದ್ದಾರೆ ಎನ್ನಲಾಗಿದೆ.
ಇಕ್ರಾಳನ್ನು ಅಕ್ರಮವಾಗಿ ಗಡಿದಾಟಿಸಿ ತಂದ ತಪ್ಪಿಗೆ ಮುಲಾಯಂ ಸಿಂಗ್ ಮೇಲೆ ವಿದೇಶಿ ಕಾಯ್ದೆಯ ಅಡಿಯಲ್ಲಿ ದೇಶದ ಭದ್ರತೆಗೆ ಅಪಾಯ ತಂದ ಆರೋಪದಡಿ ಜೈಲಿಗೆ ಕಳುಹಿಸಲಾಗಿದೆ. ತನಿಖೆಯ ವೇಳೆ ಈಕೆ ರವಾ ಯಾದವ್‌ ಹೆಸರಿನಲ್ಲಿ ನಕಲಿ ಆಧಾರ್‌ ಕಾರ್ಡ್‌ ಪಡೆದ ವಿಚಾರ ಸಹ ಬೆಳಕಿಗೆ ಬಂದಿತ್ತು. ಅಷ್ಟೇ ಅಲ್ಲದೇ ಆ ಹೆಸರಿನಲ್ಲೇ ಪಾಸ್‌ಪೋರ್ಟ್‌ ಪಡೆಯಲು ಅರ್ಜಿ ಸಲ್ಲಿಸಿದ್ದ ವಿಷಯ ಸಹ ಬಯಲಾಗಿತ್ತು.

ಭ್ರಷ್ಟರ ಬೇಟೆ

Recent Posts

SSC 2026 ಭರ್ಜರಿ ನೇಮಕಾತಿ: 3,734 ಹುದ್ದೆಗಳು – ಮೇ 4ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…

4 hours ago

ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…

4 hours ago

ದೇವನಹಳ್ಳಿ: ಚಹಾ ಅಂಗಡಿ ಯುವಕನ ಮೇಲೆ ಪೊಲೀಸ್ ದೌರ್ಜನ್ಯ – ವೈರಲ್ ವಿಡಿಯೋಗೆ ಸಾರ್ವಜನಿಕರ ಆಕ್ರೋಶ

ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ‘ಹೈವೇ ನೆಸ್ಟ್’ ಚಹಾ ಅಂಗಡಿಯಲ್ಲಿ ನಡೆದ ದೌರ್ಜನ್ಯ ಪ್ರಕರಣ ಇದೀಗ…

7 hours ago

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

19 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

1 day ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

1 day ago