Latest

ಪ್ರಿಯತಮನಿಗಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನ್ ಹುಡುಗಿ; ಪ್ರಿಯತಮೆ ಗಡಿಪಾರು ಪ್ರಿಯತಮ ಜೈಲು ಪಾಲು.

ಮುಲಾಯಂ ಸಿಂಗ್ ಕಳೆದ ಏಳು ವರ್ಷಗಳಿಂದ ಬೆಂಗಳೂರಿನ ಬೇರೆ ಬೇರೆ ಕಂಪನಿಗಳಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದ. ಈತನಿಗೆ ಆನ್‌ಲೈನ್‌ನಲ್ಲಿ ಲೂಡೋ ಆಡುವ ಅಭ್ಯಾಸವಿತ್ತು. ಹೀಗೆ ಆಟವಾಡುವಾಗ ಗೇಮ್ ಆಯಪಲ್ಲಿ ಪಾಕ್‌ ಯುವತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರು ಮದುವೆ ನಿರ್ಧಾರಕ್ಕೆ ಬಂದಿದ್ದರು. ಗೆಳತಿ ಪಾಕಿಸ್ತಾನದಲ್ಲಿದ್ದ ಕಾರಣ ನೇರವಾಗಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನ ಅರಿತಿದ್ದ ಮುಲಾಯಂ ಸಿಂಗ್ ಕರಾಚಿಯಿಂದ ದುಬೈಗೆ, ದುಬೈಯಿಂದ ನೇಪಾಳದ ಕಠ್ಮಂಡುಗೆ ಇಕ್ರಾಳನ್ನು ಕರೆಸಿಕೊಂಡಿದ್ದ. ನೇಪಾಳದಲ್ಲಿ ಇಬ್ಬರು ಮದುವೆಯಾಗಿದ್ದು ಬಳಿಕ ಕಳೆದ ಸೆಪ್ಟೆಂಬರ್‌ನಲ್ಲಿ ಬಿಹಾರದ ಗಡಿ ಪ್ರವೇಶಿಸಿ ಪಾಟ್ನಾಗೆ ಬಂದಿದ್ದರು. ಬಳಿಕ ರೈಲಿನ ಮುಖಾಂತರ ಬೆಂಗಳೂರಿಗೆ ಬಂದು ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದರು.
ಇತ್ತ ಇಕ್ರಾ ಜೀವನಿ ಪಾಕಿಸ್ತಾನದಲ್ಲಿರುವ ತಾಯಿ ಜೊತೆ ಮಾತನಾಡಲು ಕರೆ ಮಾಡುತ್ತಿದ್ದಳು. ಈ ವಿಷಯ ತಿಳಿದ ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಿತ್ತು. ಕರೆ ಆಧಾರದಲ್ಲಿ ಪೊಲೀಸರು ಮುಲಾಯಂನನ್ನು ಬಂಧಿಸಿ ಇಕ್ರಾಳನ್ನು ಎಫ್‌ಆರ್‌ಆರ್‌ಒ ಸುಪರ್ದಿಗೆ ಒಪ್ಪಿಸಿದ್ದರು. ಇಕ್ರಾ ಜೀವನಿ ಮೇಲೆ ಯಾವುದೇ ದೂರು ದಾಖಲಿಸಿರಲಿಲ್ಲ. ಈಕೆ ಪಾಕ್‌ ಪ್ರಜೆ ಎಂಬುದು ಸಾಬೀತಾದ ಹಿನ್ನೆಲೆ ವಿದೇಶಾಂಗ ಇಲಾಖೆಯ ಸಹಾಯದೊಂದಿಗೆ ಬೆಳ್ಳಂದೂರು ಪೊಲೀಸರು ವಾಘಾ – ಅಠಾರಿ ಗಡಿಯಲ್ಲಿ ಭಾನುವಾರ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಗಳಿಗೆ ಒಪ್ಪಿಸುವ ಮೂಲಕ ಗಡಿಪಾರು ಮಾಡಲಾಗಿದೆ. ಇನ್ನೂ ಗಡಿಪಾರು ಮಾಡುವ ಸಂದರ್ಭದಲ್ಲಿ ಇಕ್ರಾ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ ಎಂದು ಪೊಲೀಸರ ಮುಂದೆ ಅಂಗಲಾಚಿದ್ದಾಳೆ. ನಂತರ ಪೊಲೀಸರು ಆಕೆಯ ಮನವೊಲಿಸಿ ಗಡಿಪಾರು ಮಾಡಿ ಬಂದಿದ್ದಾರೆ ಎನ್ನಲಾಗಿದೆ.
ಇಕ್ರಾಳನ್ನು ಅಕ್ರಮವಾಗಿ ಗಡಿದಾಟಿಸಿ ತಂದ ತಪ್ಪಿಗೆ ಮುಲಾಯಂ ಸಿಂಗ್ ಮೇಲೆ ವಿದೇಶಿ ಕಾಯ್ದೆಯ ಅಡಿಯಲ್ಲಿ ದೇಶದ ಭದ್ರತೆಗೆ ಅಪಾಯ ತಂದ ಆರೋಪದಡಿ ಜೈಲಿಗೆ ಕಳುಹಿಸಲಾಗಿದೆ. ತನಿಖೆಯ ವೇಳೆ ಈಕೆ ರವಾ ಯಾದವ್‌ ಹೆಸರಿನಲ್ಲಿ ನಕಲಿ ಆಧಾರ್‌ ಕಾರ್ಡ್‌ ಪಡೆದ ವಿಚಾರ ಸಹ ಬೆಳಕಿಗೆ ಬಂದಿತ್ತು. ಅಷ್ಟೇ ಅಲ್ಲದೇ ಆ ಹೆಸರಿನಲ್ಲೇ ಪಾಸ್‌ಪೋರ್ಟ್‌ ಪಡೆಯಲು ಅರ್ಜಿ ಸಲ್ಲಿಸಿದ್ದ ವಿಷಯ ಸಹ ಬಯಲಾಗಿತ್ತು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago